ಬೆಂಗಳೂರು: ಪಾಸ್ಪೋರ್ಟ್ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವ ಪ್ರಕ್ರಿಯೆ ರಾಜ್ಯದಲ್ಲಿ ವಿಳಂಬವಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ರಾಜ್ಯ 37ನೇ ಸ್ಥಾನದಲ್ಲಿದೆ. ಪೊಲೀಸ್ ಠಾಣೆಗಳಿಗೆ ಬರುವ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಸೇವಾ ಕೇಂದ್ರಗಳಿಗೆ ಮರಳಿಸಲು ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಪ್ರವೀಣ್ ಸೂದ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಚೆನ್ನೈ, ಹೈದರಾಬಾದ್ನಲ್ಲಿ ನಾಲ್ಕು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಆಂಧ್ರ, ತೆಲಂಗಾಣ ಮತ್ತು ಗುಜರಾತ್ ಉಳಿದ ರಾಜ್ಯಗಳಿಗಿಂತಲೂ ಮುಂಚೂಣಿಯಲ್ಲಿವೆ. ನಾವು ಮಾತ್ರ ಏಕೋ ಏನೋ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆ ವಿಷಯದಲ್ಲಿ ಅಸಡ್ಡೆ ತೋರುತ್ತಿದ್ದೇವೆ ಎಂದು ಪ್ರವೀಣ್ ಸೂದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಸ್ಪೋರ್ಟ್ ಅರ್ಜಿಗಳ ವಿಲೇವಾರಿಗಾಗಿ ‘ಸಕಾಲ’ ಯೋಜನೆ ಜಾರಿಗೆ ತಂದಿರುವ ಮೊದಲ ರಾಜ್ಯ ಕರ್ನಾಟಕ. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಬೆಂಗಳೂರು ಗ್ರಾಮೀಣದಲ್ಲಿ ಶೇ 15, ಕಲಬುರ್ಗಿಯಲ್ಲಿ ಶೇ 19 ಹಾಗೂ ಕೋಲಾರದಲ್ಲಿ ಶೇ 37ರಷ್ಟು ಅರ್ಜಿಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಆಗುತ್ತಿವೆ. ಈ 21 ದಿನವೂ ಸಾರ್ವಜನಿಕರ ದೃಷ್ಟಿಯಿಂದ ವಿಳಂಬವೇ ಆಗಿದೆ ಎಂದು ಅವರು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಬೀದರ್, ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಾತ್ರ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ಕ್ರಮವಾಗಿ 5,10,11 ಹಾಗೂ 12 ದಿನಗಳಲ್ಲಿ ಮುಗಿಯುತ್ತಿದೆ. ಬೆಂಗಳೂರು ಗ್ರಾಮೀಣ, ಕಲಬುರ್ಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕ್ರಮವಾಗಿ 38, 44 ಮತ್ತು 30 ದಿನ ಹಿಡಿಯುತ್ತಿದೆ. ಬೆಂಗಳೂರು ಮತ್ತು ಮಂಗಳೂರು ಹೊರತುಪಡಿಸಿದರೆ ಉಳಿದೆಡೆ ಅಷ್ಟೇನೂ ಹೊರೆ ಇರುವುದಿಲ್ಲ. ಆದಾಗ್ಯೂ ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆಗೆ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಸೂದ್ ಎಚ್ಚರಿಸಿದ್ದಾರೆ.
ಪಾಸ್ಪೋರ್ಟ್ ಅರ್ಜಿಗಳ ಪರಿಶೀಲನೆ ಮೇಲೆ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಕಾಲಕಾಲಕ್ಕೆ ಪ್ರಗತಿ ಪರಿಶೀಲಿಸಬೇಕು. ಈ ವಿಷಯದಲ್ಲಿ ಏನಾದರೂ ಅಡೆತಡೆಗಳಿದ್ದರೆ ತಮ್ಮ ಗಮನಕ್ಕೆ ತರಬೇಕು. ತಾವೂ ಮೇಲಿಂದ ಮೇಲೆ ಪ್ರಗತಿ ಪರಿಶೀಲಿಸುವುದಾಗಿ ಡಿಜಿ ಮತ್ತು ಐಜಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ