ದುಬೈ: ಯುಎಇ ಎಕ್ಸ್ಚೇಂಜ್ ಮೂಲಕ ಮಾಡಲಾಗುವ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸಂಸ್ಥೆಯ ಅಧಿಕಾರಿಗಳೇ ಈ ಬಗ್ಗೆ ಬಹಿರಂಗಪಡಿಸಿದ್ದು, ಆನ್ಲೈನ್ ಪಾವತಿ ಸೇವೆಯನ್ನು ಕೂಡ ನಿಲ್ಲಿಸಲಾಗಿದೆ.ನಾಳೆಯಿಂದ ಯಾವುದೇ ಸೇವೆ ಇರುವುದಿಲ್ಲ ಎಂದು ಯುಎಇ ಎಕ್ಸ್ಚೇಂಜ್ ಅಧಿಕಾರಿಗಳು ತಿಳಿಸಿದ್ದಾರೆ.
ಗ್ರಾಹಕರಿಗೆ ಮಾಹಿತಿ ನೀಡಲು ಶಾಖೆಗಳನ್ನು ತೆರೆಯಲಾಗುತ್ತದೆ ಆದರೆ ಯಾವುದೇ ವ್ಯವಹಾರ ನಡೆಸಲಾಗುವುದಿಲ್ಲ. ಗ್ರಾಹಕ ಸೇವಾ ಕೇಂದ್ರ ಸಹ ತೆರೆಯಲಾಗುತ್ತಿದೆ. ಅನಾನುಕೂಲತೆಗಾಗಿ ನಾವು ಗ್ರಾಹಕರಲ್ಲಿ ಕ್ಷಮೆ ಯಾಚಿಸುತ್ತೇವೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಭಾರತೀಯ ಉದ್ಯಮಿ ಬಿ.ಆರ್. ಶೆಟ್ಟಿಯ ಯುಎಇ ಎಕ್ಸ್ಚೇಂಜನ್ನು ಮುಚ್ಚುವುದರಿಂದ ಭಾರತೀಯರು ಸೇರಿದಂತೆ ಹಲವು ವಲಸಿಗರು ಬಿಕ್ಕಟ್ಟಿಗೆ ಸಿಲುಕಲಿದ್ದಾರೆ. ಭಾರತಕ್ಕೆ ಹಣ ವ್ಯವಹಾವನ್ನು ನಡೆಸಲು ಯುಎಇ ಎಕ್ಸ್ಚೇಂಜ್ ನ್ನು ವಲಸಿಗರು ಹೆಚ್ಚಾಗಿ ಅವಲಂಬಿಸಿದ್ದಾರೆ. ಕೋವಿಡ್ ವೈರಸ್ ಹರಡಿದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದೆ ಎನ್ನಲಾಗಿದೆ. ಆದಾಗ್ಯೂ, ಯಾವಾಗ ಸೇವೆ ಆರಂಭವಾಗಲಿದೆ ಅಥವಾ ಕಾರಣವೇನು ಎಂಬುದರ ಬಗ್ಗೆ ನಿರ್ದಿಷ್ಟ ವಿವರಗಳನ್ನು ಈ ವರಿಗೆ ನೀಡಲಾಗಿಲ್ಲ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ