ಮಂಗಳೂರು,ಮಾ.19: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಾವಣೆಗೊಂಡಿರುವ ಕುದ್ರೋಳಿ,ನಡುಪಳ್ಳಿ ಜುಮಾ ಮಸೀದಿ ಇದರ ಅಧೀನದಲ್ಲಿರುವ ( ಹೆಚ್ಚುವರಿ ವಕ್ಫ್ ಆಸ್ತಿ ) 15 ಸೆಂಟ್ಸ್ ಭೂಮಿಯಲ್ಲಿ ಅತಿಕ್ರಮಿಸಿ ನಿರ್ಮಿಸಲಾಗಿದ್ದ ‘BRIGHT MODEL SCHOOL’ ನ್ಯಾಯಾಲಯದ ಆದೇಶದಂತೆ ಗುರುವಾರ ಮರು ವಶಕ್ಕೆ ಪಡೆಯಲಾಗಿದೆ.
ಕುದ್ರೋಳಿಯ ನಡುಪಳ್ಳಿ ಜುಮಾ ಮಸೀದಿ ಅಧೀನದ 15 ಸೆಂಟ್ಸ್ ಜಾಗದಲ್ಲಿ ಮಸೀದಿ ಆಡಳಿತಮಂಡಳಿಯಿಂದ ಕೈವಶಪಡಿಸಿ ಖಾಸಗಿ ಶಾಲೆಯೊಂದು ಕಾರ್ಯಾಚರಿಸುತ್ತಿತ್ತು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಾಯಿತ ಈ ಜಾಗದ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.

ಇದೀಗ ನ್ಯಾಯಾಲಯದ ಆದೇಶದಂತೆ ಈ ಜಾಗವನ್ನುದಿನಾಂಕ 19-03-2020 ರಂದು ಗುರುವಾರ ಸಂಜೆ ಗಂಟೆ 05 .00ಕ್ಕೆ ಸಾರ್ವಜನಿಕರ ಸಮ್ಮುಖದಲ್ಲಿ ಮಸೀದಿಯ ಸ್ವಾಧೀನಕ್ಕೆ ಪಡೆಯಲಾಗಿದೆ. ಶಾಲೆಯ ಮುಖ್ಯ ಶಿಕ್ಷಕರ ಕಚೇರಿ ಹಾಗೂ ಮುಖ್ಯ ಗೇಟಿಗೆ ಬೀಗಮುದ್ರೆ ಜಡಿಯಲಾಗಿದೆ. ಅತಿಕ್ರಮಣ ಪ್ರವೇಶವನ್ನು ನಿಷೇಧಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್