ದೋಹಾ: ಕೋವಿಡ್ ರೋಗವು ಅನಿಯಂತ್ರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳ ನಾಯಕರು ಎಲ್ಲ ಭಿನ್ನತೆಗಳನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಖತರ್ನ ಮಾಜಿ ಪ್ರಧಾನ ಮಂತ್ರಿ ಶೈಖ್ ಹಮದ್ ಬಿನ್ ಜಾಸಿಮ್ ಬಿನ್ ಜಾಬರ್ ಅಲ್ತಾನಿ ಕರೆ ನೀಡಿದ್ದಾರೆ.
ಜಿಸಿಸಿ ನಾಯಕರು ಒಟ್ಟಾಗಿ ಕೆಲಸ ಮಾಡಬೇಕು, ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ರೋಗದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂದರು.
ಈ ವಿಷಯವನ್ನು ಅವರು ಟ್ವಿಟರ್ನಲ್ಲಿ ಪ್ರಕಟಿಸಿದ್ದು, ರೋಗವನ್ನು ಯಾವಾಗ ಮತ್ತು ಹೇಗೆ ನಿಯಂತ್ರಿಸಬೇಕೆಂದು ನಮಗೆ ಖಚಿತವಿಲ್ಲ. ಆದರೆ, ಕೋವಿಡ್ ಸೋಂಕು ರಾಜಕೀಯ, ಜಾಗತಿಕ ಆರೋಗ್ಯ ಮತ್ತು ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬುದು ಖಚಿತ ಎಂದರು.
ವಿಶ್ವದ ಇತಿಹಾಸಕಾರರು ಕೋವಿಡ್ -19 ರ ಮೊದಲು ಮತ್ತು ನಂತರ ಎಂಬುದಾಗಿ ಮುಂದೆ ಮೌಲ್ಯಮಾಪನ ಮಾಡಲಿದ್ದಾರೆ.
ಆದರೆ, ನನ್ನ ಬೇಡಿಕೆಯನ್ನು ಖತರ್ ವಿರುದ್ಧದ ನಿರ್ಬಂಧಗಳನ್ನು ತೆಗೆದುಹಾಕುವ ತಂತ್ರವೆಂದು ಪರಿಗಣಿಸಬೇಕಾಗಿಲ್ಲ. ಕೊಲ್ಲಿ ದೇಶಗಳ ಉತ್ತಮ ಭವಿಷ್ಯಕ್ಕಾಗಿ ನಾನು ಮಾತನಾಡುತ್ತಿದ್ದೇನೆ ಎಂದು ಶೈಖ್ ಹಮದ್ ಬಿನ್ ಜಾಸಿಮ್ ಬಿನ್ ಜಾಬರ್ ಅಲ್ತಾನಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ