ತಿರುವನಂತಪುರಂ, ಎ.1: ಕೊರೋನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಲಪಾಡಿಯಲ್ಲಿ ಕರ್ನಾಟಕ ವಿಧಿಸಿರುವ ದಿಗ್ಬಂಧನವನ್ನು ತೆಗೆದುಹಾಕಬೇಕೆಂದು ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.
ಕರ್ನಾಟಕ ಹಾಗೂ ಕೇರಳ ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಾಟಕ ಸರಕಾರ ಸ್ಥಾಪಿಸಿರುವ ತಡೆಬೇಲಿಗಳನ್ನು ಯಾವುದೇ ವಿಳಂಬವಿಲ್ಲದೆ ತೆರವುಗೊಳಿಸಬೇಕು ಹಾಗೂ ಆ ಮೂಲಕ ಎರಡೂ ರಾಜ್ಯಗಳ ಗಡಿಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ವ್ಯಕ್ತಿಗಳನ್ನು ಕರೆದೊಯ್ಯುವ ವಾಹನಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುತ್ತೇವೆ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಆರೋಗ್ಯ ಸೇವೆಗಳನ್ನು ಪಡೆಯುವುದಕ್ಕೆ ಅವಕಾಶವನ್ನು ನಿರಾಕರಿಸುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯೆಂದು ಅದು ಹೇಳಿದೆ. ಈ ವಿಚಾರವಾಗಿ ಕೇಂದ್ರ ಸರಕಾರವು ತ್ವರಿತವಾಗಿ ಕಾರ್ಯ ಪ್ರವೃತ್ತವಾಗುವುದೆಂಬುದನ್ನು ತಾನು ನಿರೀಕ್ಷಿಸುವುದಾಗಿಯೂ ನ್ಯಾಯಾಲಯ ಹೇಳಿದೆ.
ಆರೋಗ್ಯ ಸೇವೆಗಳ ಪಡೆಯುವುದಕ್ಕೆ ಅವಕಾಶವನ್ನು ನಿರಾ ಕರಿಸುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯೆಂದು ಅದು ಹೇಳಿದೆ ಕೊರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಗಡಿ ರಸ್ತೆಗಳಲ್ಲಿ ತಡೆಗಳನ್ನು ನಿರ್ಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಗೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಕೆ. ಜಯಶಂಕರನ್ ನಂಬಿಯಾರ್ ಹಾಗೂ ಶಾಜಿ ಪಿ. ಚಾಲಿ ನೇತೃತ್ವದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.
ಕರ್ನಾಟಕ ವಿಧಿಸಿರುವ ದಿಗ್ಬಂಧನದ ಕಾರಣ ಕಾಸರಗೋಡು ಜಿಲ್ಲೆಯಿಂದ ಮಂಗಳೂರಿಗೆ ತುರ್ತು ಚಿಕಿತ್ಸೆಗಾಗಿ ಆಗಮಿಸಿದ ಆಂಬುಲೆನ್ಸ್ ತಡದ ಪರಿಣಾಮ ಈ ವರೆಗೆ 6 ಮಂದಿ ಮೃತಪಟ್ಟಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ