ದುಬೈ: ಯುಎಇಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಅವಕಾಶ ನೀಡಲಾಗಿದ್ದು, ಕೊಚ್ಚಿ ಮತ್ತು ತಿರುವನಂತಪುರಂಗೆ ಎಮಿರೇಟ್ಸ್ ಏರ್ಲೈನ್ಸ್ ವಿಶೇಷ ಸೇವೆಗಳನ್ನು ನಡೆಸಲಿದೆ. ಆಸಕ್ತರು ತಮ್ಮ ದೇಶಗಳಿಗೆ ಮರಳಲು ಇದೊಂದು ವಿಶೇಷ ಸೇವೆಯಾಗಲಿದೆ.
ಕೋವಿಡ್ ಹರಡುವುದರೊಂದಿಗೆ, ಯುಎಇಯಲ್ಲಿ ಅನೇಕ ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಎಮಿರೇಟ್ಸ್ ಅಂತಹ ಜನರಿಗೆ ಅವಕಾಶವನ್ನು ನೀಡಿದ್ದು, ಎಮಿರೇಟ್ಸ್ ವಿಶ್ವದಾದ್ಯಂತ 14 ನಗರಗಳಿಗೆ ವಿಶೇಷ ಸೇವೆಗಳನ್ನು ಘೋಷಿಸಿದೆ.
ಕೊಚ್ಚಿ ಮತ್ತು ತಿರುವನಂತಪುರಕ್ಕೆ ವಿಶೇಷ ವಿಮಾನ ಹಾರಾಟ ನಡೆಸಲಿದ್ದು, ವಿಶೇಷ ಅನುಮತಿ ಪ್ರಕಾರ ಸೇವೆಗಳು ಎಪ್ರಿಲ್ 6ರಿಂದ ಪ್ರಾರಂಭವಾಗಲಿವೆ.
ಭಾರತೀಯ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನಯಾನ ಸೇವೆ ಘೋಷಿಸಿದೆ. ಜನರನ್ನು ತಲುಪಿಸಲು ಎಮಿರೇಟ್ಸ್ ಈಗಾಗಲೇ ಭಾರತ ಸೇರಿದಂತೆ ವಿದೇಶಗಳಿಂದ ಅನುಮತಿ ಕೋರಿತ್ತು.
ನಿರ್ಧಾರವು ಭಾರತದ ಅನುಮೋದನೆ ಪಡೆಯುವುದು ಸಾಧದ್ಯವಾಗಲಿದೆಯೇ ಎಂಬುದರ ಮೇಲೆ ಅವಲಂಬಿತವಾಗಿದೆ. ವಿದೇಶಿ ವಿಮಾನಯಾನ ಸಂಸ್ಥೆಗಳ ಮೇಲೆ ಭಾರತದ ನಿಷೇಧ ಮುಂದುವರಿದರುವಾಗ ಇದು ಸಾಧ್ಯವಾಗಲಿದೆಯೇ ಎಂಬುದು ಕಾದು ನೋಡಬೇಕಿದೆ.
ಯುಎಇಯಲ್ಲಿ ಸಿಲುಕಿರುವ ಸಾವಿರಾರು ವಲಸಿಗರಿಗೆ ಇದು ಒಳ್ಳೆಯ ಸುದ್ದಿಯಾಗಿದ್ದು, ಏರ್ ಅರೇಬಿಯಾ ಕೂಡ ಪ್ರತ್ಯೇಕ ಸೇವೆ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಯುಎಇಗೆ ಆಗಮನಕ್ಕೆ ಅವಕಾಶವಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರವೇ ಹಿಂದಿನಂತೆ ವಿಮಾನಯಾನವು ಪುನರಾರಂಭಗೊಳ್ಳಲಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ