ದುಬೈ: ಯುಎಇಯಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗೆ ಅವಕಾಶ ನೀಡಲಾಗಿದ್ದು, ಕೊಚ್ಚಿ ಮತ್ತು ತಿರುವನಂತಪುರಂಗೆ ಎಮಿರೇಟ್ಸ್ ಏರ್ಲೈನ್ಸ್ ವಿಶೇಷ ಸೇವೆಗಳನ್ನು ನಡೆಸಲಿದೆ. ಆಸಕ್ತರು ತಮ್ಮ ದೇಶಗಳಿಗೆ ಮರಳಲು ಇದೊಂದು ವಿಶೇಷ ಸೇವೆಯಾಗಲಿದೆ.
ಕೋವಿಡ್ ಹರಡುವುದರೊಂದಿಗೆ, ಯುಎಇಯಲ್ಲಿ ಅನೇಕ ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಎಮಿರೇಟ್ಸ್ ಅಂತಹ ಜನರಿಗೆ ಅವಕಾಶವನ್ನು ನೀಡಿದ್ದು, ಎಮಿರೇಟ್ಸ್ ವಿಶ್ವದಾದ್ಯಂತ 14 ನಗರಗಳಿಗೆ ವಿಶೇಷ ಸೇವೆಗಳನ್ನು ಘೋಷಿಸಿದೆ.
ಕೊಚ್ಚಿ ಮತ್ತು ತಿರುವನಂತಪುರಕ್ಕೆ ವಿಶೇಷ ವಿಮಾನ ಹಾರಾಟ ನಡೆಸಲಿದ್ದು, ವಿಶೇಷ ಅನುಮತಿ ಪ್ರಕಾರ ಸೇವೆಗಳು ಎಪ್ರಿಲ್ 6ರಿಂದ ಪ್ರಾರಂಭವಾಗಲಿವೆ.
ಭಾರತೀಯ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನಯಾನ ಸೇವೆ ಘೋಷಿಸಿದೆ. ಜನರನ್ನು ತಲುಪಿಸಲು ಎಮಿರೇಟ್ಸ್ ಈಗಾಗಲೇ ಭಾರತ ಸೇರಿದಂತೆ ವಿದೇಶಗಳಿಂದ ಅನುಮತಿ ಕೋರಿತ್ತು.
ನಿರ್ಧಾರವು ಭಾರತದ ಅನುಮೋದನೆ ಪಡೆಯುವುದು ಸಾಧದ್ಯವಾಗಲಿದೆಯೇ ಎಂಬುದರ ಮೇಲೆ ಅವಲಂಬಿತವಾಗಿದೆ. ವಿದೇಶಿ ವಿಮಾನಯಾನ ಸಂಸ್ಥೆಗಳ ಮೇಲೆ ಭಾರತದ ನಿಷೇಧ ಮುಂದುವರಿದರುವಾಗ ಇದು ಸಾಧ್ಯವಾಗಲಿದೆಯೇ ಎಂಬುದು ಕಾದು ನೋಡಬೇಕಿದೆ.
ಯುಎಇಯಲ್ಲಿ ಸಿಲುಕಿರುವ ಸಾವಿರಾರು ವಲಸಿಗರಿಗೆ ಇದು ಒಳ್ಳೆಯ ಸುದ್ದಿಯಾಗಿದ್ದು, ಏರ್ ಅರೇಬಿಯಾ ಕೂಡ ಪ್ರತ್ಯೇಕ ಸೇವೆ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಯುಎಇಗೆ ಆಗಮನಕ್ಕೆ ಅವಕಾಶವಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರವೇ ಹಿಂದಿನಂತೆ ವಿಮಾನಯಾನವು ಪುನರಾರಂಭಗೊಳ್ಳಲಿದೆ.















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ