ದುಬೈ: ಕೆಲವು ವೈಮಾನಿಕ ಕಂಪೆನಿಗಳು ಭಾರತಕ್ಕೆ ಟಿಕೆಟ್ ಕಾಯ್ದಿರಿಸಲು ಪ್ರಾರಂಭಿಸಿದ್ದರೂ, ಪ್ರಯಾಣಿಸಲು ಸಾಧ್ಯವಾಗುತ್ತದೆಯೇ ಎಂಬ ಬಗ್ಗೆ ಅನಿಶ್ಚಿತತೆ ಉಳಿದಿದೆ. ಪ್ರಯಾಣಿಕರನ್ನು ಭಾರತಕ್ಕೆ ಕರೆದೊಯ್ಯುವ ಬಗ್ಗೆ ಸರಕಾರದಿಂದ ಈ ವರೆಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದುಬೈನ ಭಾರತೀಯ ಕಾನ್ಸುಲ್ ಜನರಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊಚ್ಚಿ ಮತ್ತು ಕೋಝಿಕೋಡ್ ಸೇರಿದಂತೆ ಭಾರತದ ಎಂಟು ನಗರಗಳಲ್ಲಿ ಫ್ಲೈ ದುಬೈ ಬುಕಿಂಗ್ ಪ್ರಾರಂಭಿಸಲಾಗಿದೆ. ಈ ತಿಂಗಳ 15ರಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುವುದಾಗಿ ಅದು ಪ್ರಕಟಿಸಿದೆ. ಆದರೆ, ಭಾರತದಲ್ಲಿ ಲಾಕ್ಡೌನ್ ಮುಂದುವರಿಸಲಾಗುತ್ತದೆಯೇ, ವಿಮಾನ ಸೇವೆಯನ್ನು ನಿಷೇಧಿಸಲಾಗುತ್ತದೆಯೇ ಮತ್ತು ವಿಮಾನ ಇಳಿಯಲು ಸಾಧ್ಯವಾಗಲಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಈ ಮೊದಲು ಯುಎಇಯಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕಳುಹಿಸಲು ಯೋಜಿಸುತ್ತಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದ್ದವು. ಭಾರತ ಸರಕಾರದಿಂದ ನಾಗರಿಕರನ್ನು ಮರಳಿಸುವ ಬಗ್ಗೆ ಯಾವುದೇ ಮಾರ್ಗದರ್ಶನವಿಲ್ಲ ಎಂದು ದುಬೈನ ಭಾರತೀಯ ಕಾನ್ಸುಲ್ ಜನರಲ್ ವಿಪುಲ್ ತಿಳಿಸಿದರು.
ಬುಕಿಂಗ್ ಪ್ರಾರಂಭವಾದ ನಂತರ, ಟಿಕೆಟ್ ಖರೀದಿಸುವವರ ಸಂಖ್ಯೆಯು ಏರಿದೆ. ವೆಬ್ಸೈಟ್ನಲ್ಲಿ ಇರುವ ಮಾಹಿತಿ ಪ್ರಕಾರ ಮೇ 2 ರವರೆಗಿನ ಟಿಕೇಟ್ ಮಾರಾಟವಾಗಿದೆ. ಮೇ 2 ರಂದು, ಕೊಚ್ಚಿಗೆ ಏಕಮುಖ ಹಾರಾಟಕ್ಕೆ 1,325 ದಿರ್ಹಂ ಅಥವಾ 27,000 ರೂ. ವೆಚ್ಚವಾಗಿದೆ. ಫ್ಲೈ ದುಬೈ ಭಾರತ ಹೊರತಾಗಿ ಪಾಕಿಸ್ತಾನಕ್ಕೂ ವಿಮಾನ ಕಾಯ್ದಿರಿಸಲು ಪ್ರಾರಂಭಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ