ಮಂಗಳೂರು, ಏ.10: ಶುಕ್ರವಾರ ಬೆಳಗ್ಗೆಯಿಂದ ಜಿಲ್ಲೆ ಸೀಲ್ಡ್ ಡೌನ್ ಆಗಲಿದೆ ಎನ್ನುವ ಸುಳ್ಳು ಸುದ್ದಿಯಿಂದ, ಜನರು ಆತಂಕಗೊಂಡಿದ್ದರು. ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಜಿಲ್ಲಾಡಳಿತ “ಇದೊಂದು ಸುಳ್ಳು ಸುದ್ದಿ” ಎಂದು ಹೇಳಿದೆ.
“ಈಗಾಗಲೇ ಲಾಕ್ ಡೌನ್ ಇರುವುದರಿಂದ, ಜಿಲ್ಲೆಯನ್ನು ಸಂಪೂರ್ಣವಾಗಿ ಸೀಲ್ಡ್ ಡೌನ್ ಮಾಡುವ ಯಾವ ಪ್ರಕ್ರಿಯೆಗಳೂ ನಡೆಯುತ್ತಿಲ್ಲ. ರಾಜ್ಯ ಸರಕಾರದಿಂದ ಯಾವ ಸುತ್ತೋಲೆಗಳೂ ಬಂದಿಲ್ಲ” ಎಂದು ಜಿಲ್ಲಾಡಳಿತ ಅತ್ಯಂತ ಸ್ಪಷ್ಟವಾಗಿ ಹೇಳಿದೆ.
“ಮುಂದಿನ ಕೆಲವು ದಿನ ಲಾಕ್ ಡೌನ್ ಮುಂದುವರಿಯಲಿದೆ. ಇದನ್ನೇ ನಾವು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದೇವೆಯೇ ಹೊರತು, ಸೀಲ್ಡ್ ಡೌನ್ ಇಲ್ಲ. ಜನರು ವದಂತಿಯನ್ನು ನಂಬಬೇಡಿ” ಎಂದು ಜಿಲ್ಲಾಡಳಿತ, ಸಾರ್ವಜನಿಕರಲ್ಲಿ ಮನವಿ ಮಾಡಿದೆ.
“ಸುದ್ದಿ ಪ್ರಸಾರ ಮಾಡುವ ಮೊದಲು, ಸಂಬಂಧ ಪಟ್ಟ ಇಲಾಖೆಯಿಂದ ದೃಢೀಕರಿಸಲು ಕೋರಲಾಗಿದೆ. ಆದರೂ, ಇಂತಹ ಸುಳ್ಳುಸುದ್ದಿಗಳು ಪ್ರಸಾರವಾಗುತ್ತಿವೆ. ಇದರಿಂದ, ಅನಗತ್ಯವಾಗಿ ಸಾರ್ವಜನಿಕರು ಗಾಭರಿಗೊಳಗಾಗುತ್ತಾರೆ” ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆಯನ್ನು ನೀಡಿದ್ದಾರೆ.
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ತೆಗೆದುಕೊಂಡ ಕ್ರಮದ ರೀತಿಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳು ಸೀಲ್ಡ್ ಡೌನ್ ಆಗಲಿದೆ. ಇದರಿಂದ, ಸಾರ್ವಜನಿಕರಿಗೆ ದೈನಂದಿನ ಪದಾರ್ಥಗಳೂ ಸಿಗುವುದಿಲ್ಲ ಎನ್ನುವ ಸುದ್ದಿ ಶುಕ್ರವಾರ ಬೆಳಗ್ಗೆ, ದಟ್ಟವಾಗಿ ಜಿಲ್ಲೆಯಲ್ಲಿ ಹರಿದಾಡುತ್ತಿತ್ತು















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್