ಮಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ನಿಯಮ ಮೀರಿ ಗೆಳೆಯನನ್ನು ಸೂಟ್ ಕೇಸ್ ನಲ್ಲಿ ತುಂಬಿಸಿ ರೂಮಿಗೆ ಕರೆದೊಯ್ದು ಸಿಕ್ಕಿಬಿದ್ದ ಘಟನೆ ನಗರದಲ್ಲಿ ನಡೆದಿದೆ.
ನಗರದ ಆರ್ಯಸಮಾಜ ರಸ್ತೆಯಲ್ಲಿರುವ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ ವಾಸವಾಗಿದ್ದ. ವಸತಿ ಸಮುಚ್ಚಯ ಅಸೋಸಿಯೇಷನ್ ಲಾಕ್ ಡೌನ್ ಹಿನ್ನಲೆಯಲ್ಲಿ ವಾಸ್ತವ್ಯ ಇರುವವರು ಹೊರತುಪಡಿಸಿ ಇತರರಿಗೆ ಪ್ರವೇಶ ನಿರಾಕರಣೆ ಮಾಡಿತ್ತು. ವಿದ್ಯಾರ್ಥಿಯೊಬ್ಬ ‘ತಾನು ಒಂಟಿಯಾಗಿದ್ದು, ತನ್ನ ಗೆಳೆಯನನ್ನು ರೂಮಿಗೆ ಕರೆದುಕೊಂಡು ಬರುತ್ತೇನೆ’ ಎಂದು ಹೇಳುತ್ತಿದ್ದ. ಇದಕ್ಕೆ ವಸತಿ ಸಮುಚ್ಚಯ ಅಸೋಸಿಯೇಷನ್ ಅನುಮತಿ ನೀಡಿರಲಿಲ್ಲ. ಆದರೂ ಹಠ ಬಿಡದ ಯುವಕ ಭಾನುವಾರ ಬೆಳಗ್ಗೆ ತನ್ನ ಗೆಳೆಯನನ್ನು ಸೂಟ್ ಕೇಸಿನಲ್ಲಿ ತುಂಬಿಸಿ ರೂಮಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾನೆ.
ಈ ವೇಳೆ ಸೂಟ್ ಕೇಸ್ ನಲ್ಲಿ ಸಂಚಲನ ಕಂಡು ಬಂದಿದ್ದು, ವಸತಿ ಸಮುಚ್ಚಯದಲ್ಲಿರುವ ಇತರರ ಗಮನಕ್ಕೆ ಬಂದಿದೆ. ಕೂಡಲೇ ಎಲ್ಲರೂ ಸೇರಿ ಸೂಟ್ ಕೇಸ್ ತೆರೆಯುವಂತೆ ಒತ್ತಾಯಿಸಿದ್ದಾರೆ. ಸಂದಿಗ್ಧ ಸ್ಥಿತಿಗೆ ಸಿಲುಕಿದ ಯುವಕ ಸೂಟ್ ಕೇಸ್ ತೆರೆಯುವಾಗ ಸತ್ಯಾಂಶ ಬಹಿರಂಗವಾಗಿದೆ.
ಕೂಡಲೇ ಈ ವಿಷಯವನ್ನು ಕದ್ರಿ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇಬ್ಬರನ್ನು ಕದ್ರಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್