ಕುವೈಟ್ ಸಿಟಿ: ಕೋವಿಡ್ 19 ರ ಪರಿಣಾಮವಾಗಿ ವಿದೇಶಗಳಲ್ಲಿ ಯಾತನೆ ಅನುಭವಿಸುವ ಭಾರತೀಯ ವಲಸಿಗರನ್ನು ವಾಪಸ್ ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ. ಪ್ರವಾಸಿ ಲೀಗಲ್ ಸೆಲ್ನ ಜಾಗತಿಕ ಅಧ್ಯಕ್ಷ ಅಡ್ವಕೆಟ್.ಜೋಸ್ ಅಬ್ರಹಾಂ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಯಾತನೆ ಅನುಭವಿಸುತ್ತಿರುವ ವಿದೇಶಿ ಭಾರತೀಯರನ್ನು ವಾಪಸು ಕರೆತರುವುದರ ಜೊತೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ಆನ್ಲೈನ್ನಲ್ಲಿ ವೈದ್ಯರ ಪರಿಶೋಧನೆ ಮತ್ತು ಸಮಾಲೋಚನೆಗಾಗಿ ವೆಬ್ ಪೋರ್ಟಲ್ ಸಜ್ಜುಗೊಳಿಸುವ ತುರ್ತು ಅಗತ್ಯವನ್ನು ಸಹ ಅರ್ಜಿಯಲ್ಲಿ ಕೋರಲಾಗಿದೆ.
ಭಾರತೀಯ ರಾಯಭಾರಿ, ಹೈಕಮೀಷನ್ ಸಾರಥ್ಯದಲ್ಲಿ ರೋಗ ಲಕ್ಷಣವಿರುವ ವಲಸಿಗ ಭಾರತೀಯರನ್ನು ಪರಿಶೋಧನೆಗೆ ಒಳಪಡಿಸಬೇಕು. ಆಹಾರ, ಔಷಧ, ನೀರಿನ ಸೌಲಭ್ಯಗಳನ್ನು ಒದಗಿಸಬೇಕು. ಅತ್ಯಧಿಕ ಸಂಖ್ಯೆಯಲ್ಲಿರುವ ಕಾರ್ಮಿಕರನ್ನು ಸುರಕ್ಷಿತ ಶಿಬಿರಗಳಿಗೆ ಸ್ಥಳಾಂತರಿಸಬೇಕು. ರೋಗದಿಂದ ಬಳಲುತ್ತಿರುವ ವಲಸಿಗ ಭಾರತೀಯರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.
ಪ್ರವಾಸಿ ಲೀಗಲ್ ಸೆಲ್ ಇದೇ ಕೋರಿಕೆಯೊಂದಿಗೆ, ಮುಖ್ಯಮಂತ್ರಿ ಇತರ ಸಂಸದರು ಪ್ರಧಾನಿ ಮತ್ತು ವಿದೇಶಾಂಗ ಸಚಿವರಿಗೆ ಪತ್ರಗಳನ್ನು ಕಳುಹಿಸಿದ್ದು, ಆದರೆ ಕೇಂದ್ರ ಸರಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಪ್ರವಾಸಿ ಲೀಗಲ್ ಸೆಲ್ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಅನುಕೂಲಕರ ನ್ಯಾಯ ಲಭಿಸುವ ಬರವಸೆ ಇದೆ ಎಂದು ಕುವೈತ್ ಚಾಪ್ಟರ್ ಅಧ್ಯಕ್ಷ ಬಾಬು ಫ್ರಾನ್ಸಿಸ್, ಪ್ರಧಾನ ಕಾರ್ಯದರ್ಶಿ ಬಿಜು ಸ್ಟೀಫನ್ ಪತ್ರಿಕಾ ಪ್ರಕಟಮೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ