ದುಬೈ: ಪವಿತ್ರ ರಮಝಾನ್ನಲ್ಲಿ ಒಂದು ಕೋಟಿ ಜನರಿಗೆ ಆಹಾರವನ್ನು ಒದಗಿಸುವ ಯೋಜನೆಯನ್ನು ಪ್ರಕಟಿಸಿದೆ. ‘ಟೆನ್ ಮಿಲಿಯನ್ ಮೀಲ್ಸ್ ‘ ಎಂಬ ಶೀರ್ಷಿಕೆಯ ಯೋಜನೆಯನ್ನು ಯುಎಇ ಉಪಾಧ್ಯಕ್ಷ, ಪ್ರಧಾನಿ ಮತ್ತು ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಷಿದ್ ಆಲ್ ಮಕ್ತೂಂ ಘೋಷಿಸಿದ್ದಾರೆ.
ಶೈಖ ಹಿಂದ್ ಬಿಂತ್ ಮಕ್ತೂಮ್ ಈ ಯೋಜನೆಯ ಉಸ್ತುವಾರಿ ವಹಿಸಲಿದ್ದು, ವ್ಯಕ್ತಿಗಳು ಅಥವಾ ಕುಟುಂಬಗಳೇ ಆಗಿರಲಿ, ಅಗತ್ಯವಿರುವವರಿಗೆ ಒಂದು ಕೋಟಿ ಆಹಾರ ಪೊಟ್ಟಣಗಳನ್ನು ತಲುಪಿಸುವ ಯೋಜನೆಯನ್ನು ನೋಡಿಕೊಳ್ಳಲಿದ್ದಾರೆ. ಜಗತ್ತು ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ ರಮಝಾನ್ ಸಮಯದಲ್ಲಿ ಆಹಾರವನ್ನು ಪೂರೈಸುವುದು ಅತ್ಯಂತ ಮಾನವೀಯ ಕಾರ್ಯವಾಗಿದ್ದು, ಆ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಶೈಖ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಹೇಳಿದರು.
ದೇಶದಲ್ಲಿ ಯಾರೂ ಹಸಿವಿನಿಂದ ಇರಲಾರರು. ಯಾರೂ ಸಹಾಯಕರಿಲ್ಲದೆ ಒಬ್ಬನೇಯೊಬ್ಬ ರೋಗಿಯೋ, ಮುಗ್ದರೋ,ಅಸಹಾಯಕರೋ ದೇಶದಲ್ಲಿ ಹಸಿವಿನಿಂದ ಇರಬಾರದು. ಈ ಧ್ಯೇಯ ಮತ್ತು ಜವಾಬ್ದಾರಿ ದೇಶದ ಧ್ವನಿಯಾಗಿರಬೇಕು ಎಂದು ಶೈಖ್ ಮುಹಮ್ಮದ್ ಹೇಳಿದರು.
ಯುಎಇಯ ಟೆಲಿಕಾಂ ಕಂಪೆನಿಗಳು ಎಸ್ಎಂಎಸ್ ಮೂಲಕ ಊಟವನ್ನು ಪ್ರಾಯೋಜಿಸುವ ಯೋಜನೆಯನ್ನು ಕೂಡ ಪ್ರಾರಂಭಿಸಿವೆ. ಈ ಯೋಜನೆಯನ್ನು ದೇಶವು ಕಂಡ ಅತಿದೊಡ್ಡ ಸಾಮಾಜಿಕ ಉದ್ಯಮಗಳಲ್ಲಿ ಒಂದಾಗಿ ರೂಪಾಂತರಗೊಳಿಸಲು ದೇಶವು ಸಿದ್ಧತೆ ನಡೆಸುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು