ಹೊನ್ನಾವರ: ಕೋವಿಡ್-19 ಮಹಾಮಾರಿಯ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿದ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಸಿಲುಕಿದವರನ್ನು ತವರಿಗೆ ತೆರಳಲು ನಿನ್ನೆ ರಾಜ್ಯ ಸರ್ಕಾರ ಅನುಮತಿಸಿದೆ.
ಇದರನ್ವಯ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ, ತಾಲೂಕಿನಿಂದ ಇನ್ನೊಂದು ತಾಲೂಕಿಗೆ ಪ್ರವೇಶಿಸುವವರಿಗೆ ಕ್ವಾರಂಟೈನ್ ನಲ್ಲಿ ಉಳಿಯುವಂತೆ ಆದೇಶಿಸಲಾಗಿದ್ದು, ಗಡಿ ಪ್ರದೇಶದಲ್ಲಿ ಕೈಗಳಿಗೆ ಸೀಲು ಹಾಕಿ ಕಳಿಸಲಾಗುತ್ತಿದೆ. ಇದೀಗ ಈ ಸೀಲಿನಲ್ಲಿ ಧರ್ಮಾಧಾರಿತವಾಗಿ ವಿವೇಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಉತ್ತರಕನ್ನಡದ ಕಾರವಾರ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸುಪಾ ಎಂಬಲ್ಲಿ ಸಾಗರದಿಂದ ಹೊನ್ನಾವರಕ್ಕೆ ತೆರಳಿದ ಕುಟುಂಬಕ್ಕೆ ಕೈಗೆ ಹಾಕಿದ ಸೀಲು ಆಸಿಡ್ ಮಿಶ್ರಿತವೆಂಬ ಸಂದೇಹವಿದ್ದು, ಮಕ್ಕಳ ಮತ್ತು ಮಹಿಳೆಯರ ಕೈಗಳಿಗೆ ಸೀಲು ಹಾಕಿದ ಭಾಗ ಸುಟ್ಟುಕರಕಲಾಗಿದೆ.
ಸೀಲುಹಾಕುವ ಅಧಿಕಾರಿಗಳು ಧರ್ಮ ವಿವೇಚನೆ ನಡೆಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದು, ಆರೋಗ್ಯ ಕಾರ್ಯಕರ್ತರ ಈ ಅಮಾನವೀಯ ಕೃತ್ಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಸರ್ಕಾರದ ಗಮನಕ್ಕೆ ಬಾರದೇ, ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಉದ್ದೇಶದಿಂದ ಯಾವುದೋ ಕಿಡಿಗೇಡಿಗಳು ನೀಡಿದ ನಿರ್ದೇಶನ ಮೇರೆಗೆ ಕಾರಂಟೈನ್ ಸೀಲಿನಲ್ಲಿ ಧಾರ್ಮಿಕ ವಿವೇಚನೆ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ