ದೋಹಾ: ಮುಂದಿನ ಹದಿನೈದರಿಂದ ಖತರ್ನಿಂದ ಭಾರತಕ್ಕೆ ಎರಡನೇ ಹಂತದ ಪ್ರಯಾಣ ಪ್ರಾರಂಭವಾಗಲಿದೆ ಎಂದು ಅಲ್ಲಿನ ಭಾರತೀಯ ರಾಯಭಾರಿ ಪಿ.ಕುಮಾರನ್ ಪ್ರಕಟಿಸಿದ್ದಾರೆ. ಈ ಸೇವೆಯು ಭಾರತದ ಹಲವು ರಾಜ್ಯಗಳಿಗೆ ಲಭ್ಯವಿರುತ್ತದೆ. ಕೇರಳಕ್ಕೂ ಒಂದು ಅಥವಾ ಎರಡು ವಿಮಾನಗಳ ಸೇವೆ ಲಭ್ಯವಾಗಲಿವೆ.
ಮೊದಲ ಹಾರಾಟದಲ್ಲಿ, ಗರ್ಭಿಣಿಯರು ಮತ್ತು ವಯೋಸಹಜ ರೋಗಿಗಳಿಗೆ ಹೆಚ್ಚಿನ ಪರಿಗಣನೆಯನ್ನು ನೀಡಲಾಗಿತ್ತು.
ತವರಿಗೆ ಮರಳುವ ಪ್ರಯಾಣಕ್ಕಾಗಿ ಈಗಾಗಲೇ ನಲವತ್ತನಾಲ್ಕು ಸಾವಿರ ಮಂದಿ ನೋಂದಾಯಿ ಸಿದ್ದಾರೆ ಎನ್ನಲಾಗಿದೆ. ಇವುಗಳಲ್ಲಿ ಅತ್ಯಂತ ಅರ್ಹರನ್ನು ಊರಿಗೆ ಕಳುಹಿಸಲಾಗುತ್ತದೆ. ಕ್ಷಮಾದಾನ ಪಡೆದ ನಂತರ ಜೈಲಿನಿಂದ ಬಿಡುಗಡೆಯಾದ 70 ಜನರು ಮತ್ತು ಗಡೀಪಾರು ಕೇಂದ್ರದಲ್ಲಿರುವ 200 ಮಂದಿ ನೋಂದಾಯಿಸಿದವರ ಪಟ್ಟಿಯಲ್ಲಿ ಸೇರಿದ್ದಾರೆ.
ಇವರನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು.ಅದೇ ರೀತಿ ಮನೆಕೆಲಸದ ಅನೇಕ ಮಹಿಳೆಯರು ಕೂಡ ಪ್ರಯಾಣಕ್ಕಾಗಿ ನೋಂದಾಯಿಸಿಕೊಂಡಿದ್ದು, ಇವರನ್ನು ಕೂಡ ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು ಎಂದು ರಾಯಭಾರಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು