ಮಂಗಳೂರು ನಗರದ ವಿವಿಧೆಡೆ ಇದ್ದ ಜಾರ್ಖಂಡ್ ಮೂಲದ ಕಾರ್ಮಿಕರು ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಊರಿಗೆ ತೆರಳಲು ಸರಕಾರ, ಅಧಿಕಾರಿಗಳು ನೀಡಿದ್ದ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಇದ್ದ ಕಾರ್ಮಿಕರು ಒಂದೆಡೆ ಸೇರಿ ಕಾಲ್ನಡಿಗೆಯಲ್ಲಿ ಪ್ರಯಾಣ ಬೆಳೆಸಿದರು.
ಮಂಗಳೂರಿನಿಂದ ಕಾಲ್ನಡಿಗೆಯಲ್ಲಿ ಬರುತ್ತಿರುವ ವಿಷಯ ತಿಳಿದು ಮಗಳೂರು ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ & ಪುದು ಗ್ರಾಮ ಪಂಚಾಯತ್ ಸದಸ್ಯ ಹಾಶೀರ್ ಪೇರಿಮಾರ್ ನೇತೃತ್ವದಲ್ಲಿ ವಲಸೆ ಕಾರ್ಮಿಕರಿಗೆ ತುಂಬೆ ಜಂಕ್ಷನ್ ನಲ್ಲಿ ಮೂಸಂಬಿ ಹಣ್ಣುಗಳನ್ನು ವಿತರಿಸಲಾಯಿತು.
ಪಿ.ಎಫ್.ಐ. ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಕುಂಪನಮಜಲು, ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಟೆನ್ ಮೈಲ್ ನೇತೃತ್ವದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು. ಕಾರ್ಮಿಕರೊಂದಿಗೆ ಬಂಟರ ಭವನದ ವರೆಗೆ ತೆರಳಿದ ಇವರು ತಮ್ಮ ಪ್ರಯಾಣ ಮುಂದುವರಿಸಲು ಮುಂದಾದ ಕಾರ್ಮಿಕರಲ್ಲಿ ಬಂಟರ ಭವನದಲ್ಲಿ ತಾತ್ಕಾಲಿಕವಾಗಿ ಉಳಿಯುವಂತೆ ಪೊಲೀಸರ ಜೊತೆ ಸೇರಿ ಮನವೊಲಿಸುವಲ್ಲಿ ಯಶಸ್ವಿಯಾದರು.



ಈ ಸಂದರ್ಭದಲ್ಲಿ ಮಂಗಳೂರು ಯುವ ಕಾಂಗ್ರೆಸ್ ಕಾರ್ಯದರ್ಶಿ ಹಿಶಾಂ ಫರಂಗಿಪೇಟೆ, ಜಾಬೀರ್ ಪೇರಿಮಾರ್, ಸಲ್ಮಾನ್ ಫಾರೀಶ್, ಫಾಶ್ವತ್ ಫರಂಗಿಪೇಟೆ, ಫಾಝೀಲ್ ಪೇರಿಮಾರ್, ಹಾಗೂ ಪಿ.ಎಫ್.ಐ. ಬಂಟ್ವಾಳ ಮುಖಂಡ ಇರ್ಫಾನ್ ತುಂಬೆ, ಶರೀಫ್ ಕುಂಪನಮಜಲು, ತುಂಬೆ ಗ್ರಾಮ ಪಂಚಾಯತ್ ಸದಸ್ಯ ಝಹೂರ್ ಅಹ್ಮದ್ ಹಾಗೂ ಪ್ರಧಾನ ಕಾರ್ಯದರ್ಶಿ ಮೂಸಬ್ಬ ರವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್