ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿಯ ಅಧೀನದಲ್ಲಿ ವಲಯ ಸಮಿತಿಗಳ ಸಹಕಾರದೊಂದಿಗೆ ಸುಮಾರು ನೂರ ಏಳು ಧರ್ಮಗುರುಗಳಿಗೆ ವಲಯ ನಾಯಕರ ಮುಖಾಂತರ ಗೌರವಧನ ವಿತರಿಸಲಾಯಿತು.


ತಾಲೂಕು ಅದ್ಯಕ್ಷರಾದ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿಯವರ ಅದ್ಯಕ್ಷತೆಯಲ್ಲಿ ನಡೆದ ಸರಳ ಸಭೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರದಾನ ಕಾರ್ಯದರ್ಶಿ ರಾಜ್ಯ ವಕ್ಫ್ ಸದಸ್ಯರೂ ಆದ ಮೌಲಾನ ಶಾಫಿ ಸಅದಿಯವರು ಉದ್ಘಾಟಿಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ನಡಿಸಿಕೊಂಡು ಬರುತ್ತಿರುವ ಇಂತಹ ಸಾಂತ್ವನ ಚಟುವಟಿಕೆಗಳನ್ನು ಮುಕ್ತಕಂಠದಿಂದ ಪ್ರಶಂಸಿದ ಶಾಫಿ ಸಅದಿಯವರು ಪುತ್ತೂರು ತಾಲೂಕು ಸಮಿತಿಯು ಇತರ ಜಿಲ್ಲಾ ಸಮಿತಿಗಳಿಗೆ ಮಾದರಿಯೆಂದು ಕೊಂಡಾಡಿದರು.
ಸಮಿತಿಯ ಪ್ರದಾನ ಕಾರ್ಯದರ್ಶಿ ಬಿ.ಪಿ ಇಸ್ಮಾಯಿಲ್ ಹಾಜಿ ಬೈತಡ್ಕ ಸ್ವಾಗತಿಸಿದರು.ಉಪಾದ್ಯಕ್ಷರಾದ ಶಕೂರು ಹಾಜಿ,ಖಾಸಿಮ್ ಹಾಜಿ ಮಿತ್ತೂರು,ಇಂಜಿನಿಯರ್ ಫಾರೂಕು ಬುಳರೀಕಟ್ಟೆ,ಮಜ್ಮ ಹಸೈನಾರ್ ಹಾಜಿ, ಸಿ ಎಂ ಅಬೂಬಕರ್ ಹಾಗೂ ವಲಯ ನಾಯಕರು ಉಪಸ್ಥಿತಿರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ