ಮಂಗಳೂರು: ಮಂಗಳೂರಿನ ಪಂಪ್ವೆಲ್ನಲ್ಲಿ ಇಂಟಿಗ್ರೇಟೆಡ್ ಟ್ರಾನ್ಸ್ ಪೋರ್ಟ್ ಹಬ್ ನಿರ್ಮಾಣ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರಕಿದ್ದು, ಕೆಲವು ದಿನಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಸಂಪುಟದ ಅನುಮೋದನೆ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಮೊದಲಾದವರು ಗುರುವಾರ ಪಂಪ್ವೆಲ್ ಬಸ್ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಾಣಿಜ್ಯ ಕೇಂದ್ರ ಮಂಗಳೂರಿನಲ್ಲಿ ಬೆಳೆಯುತ್ತಿರುವ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಬದಲಿ ಬಸ್ ನಿಲ್ದಾಣದ ಆವಶ್ಯಕತೆಯಿದೆ ಎನ್ನುವುದು ಸಾರ್ವಜನಿಕರ ಬೇಡಿಕೆಯಾಗಿತ್ತು. ಪಂಪ್ವೆಲ್ ಬಳಿ ಮನಪಾ ಕಾದಿರಿಸಿದ ಸುಮಾರು 7.23 ಎಕರೆ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಪಿಪಿಪಿ ಮಾದರಿಯಲ್ಲಿ 445 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು.
ನಿಲ್ದಾಣದಲ್ಲಿ ಏನೇನಿರಲಿದೆ?
180 ಬಸ್ ಬೇ ಗಳೊಂದಿಗೆ ಬಸ್ ಟರ್ಮಿನಲ್, ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಸೇವೆ ಮತ್ತು ದೂರದ ಪ್ರಯಾಣದ ಬಸ್ ವ್ಯವಸ್ಥೆಯೂ ಆ ಪರಿಸರದಲ್ಲಿ ಲಭ್ಯವಿರಲಿದೆ. ಇದು ರಾಜ್ಯದಲ್ಲೇ ವಿನೂತನ ಮಾದರಿ ಬಸ್ ನಿಲ್ದಾಣ ನಿರ್ಮಾಣವಾಗಿ ಮುಂದಿನ ದಿನಗಳಲ್ಲಿ ಈ ಸೇವೆ ಲಭ್ಯವಾಗಲಿದೆ.
ಇದರಲ್ಲಿ ಸುಮಾರು 10 ಲಕ್ಷ ಚದರ ಅಡಿ ವಿಸ್ತೀರ್ಣದ ಶಾಪಿಂಗ್ ಮಾಲ್, ಕಚೇರಿ ಸ್ಥಳ, ನಗರದ ಜನರಿಗಾಗಿ ಮಲ್ಟಿ-ಲೆವೆಲ್ ಕಾರ್ ಪಾರ್ಕಿಂಗ್ ವ್ಯವಸ್ಥೆ ಆಗಲಿದೆ. ಇವೆಲ್ಲವೂ ಆದ ಬಳಿಕ ಗುತ್ತಿಗೆ ಪಡೆದವರು 40 ವರ್ಷಗಳ ಕಾಲ ಅದನ್ನು ನಿರ್ವಹಿಸಿ ಅನಂತರ ನಿಲ್ದಾಣವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಬೇಕು ಎಂಬುದು ನಿಯಮ. ಅನುಮೋದನೆ ದೊರೆತ ಅನಂತರ 3 ವರ್ಷಗಳ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
ಸ್ಥಾಯೀ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್ ಕದ್ರಿ, ಕಾವ್ಯ ನಟರಾಜ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜೆ. ಸುರೇಂದ್ರ, ರೂಪಾ ಡಿ. ಬಂಗೇರ, ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ