ಜೆದ್ದಾ : ಅನಿವಾಸಿ ಕಾಂಗ್ರೆಸ್ ಕಾರ್ಯಕರ್ತರ ಹತ್ತು ಘಟಕಗಳ ಪ್ರತಿನಿಧಿಗಳೊಂದಿಗೆ ಒನ್ಲೈನ್ ಸಂವಾದ ಕಾರ್ಯಕ್ರಮ ಝೂಮ್ ಆಪ್ ನಲ್ಲಿ ಮಾಜಿ ಸಚಿವ ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಜೊತೆ ಇತ್ತೀಚೆಗೆ ನಡೆಯಿತು.
ಕೋವಿಡ್-19 ಸಮಸ್ಯೆಯಿಂದಾಗಿ ವಿಮಾನ ಯಾನ ಇಲ್ಲದೇ ಇರುವುದರಿಂದ ಹಲವಾರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗರ್ಭಿಣಿಯರು, ಹಿರಿಯ ನಾಗರಿಕರು, ವೀಸಾ ಅವಧಿ ಮುಗಿದ ಮತ್ತು ಕೆಲಸ ಇಲ್ಲದೇ ಇರುವ ಹಲವಾರು ಮಂದಿ ಊರಿಗೆ ಹೋಗಲಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ, ಆದ್ದರಿಂದ ಆದಷ್ಟು ಬೇಗ ಸೌದಿ ಅರೇಬಿಯಾದ ಜಿದ್ದಾದಿಂದ ಮಂಗಳೂರಿಗೆ ವಿಮಾನಯಾನ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲು ಮನವಿ ಮಾಡಲಾಯಿತು.
ಇದುವರೆಗೆ ಕೇವಲ ಭಾರತದ ರಾಯಭಾರಿ ಕಚೇರಿಯಲ್ಲಿ ಹೆಸರು ನೋಂದಾವಣೆ ಕೆಲಸ ಬಿಟ್ಟರೆ ಇನ್ನೇನು ಮಾಹಿತಿ ಸಿಗಲಿಲ್ಲ ಮತ್ತು ಯಾವುದೇ ವಿಮಾನ ಹಾರಾಟದ ಮಾಹಿತಿ ಕೂಡ ಸಿಗಲಿಲ್ಲ. ಅದೇ ರೀತಿ ಮಂಗಳೂರಿಗೆ ದುಬೈಯಿಂದ ಬಂದಿದ್ದ ಮೊದಲ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದ ಅವ್ಯವಸ್ಥೆ ಮತ್ತು ಜಿಲ್ಲಾಡಳಿತದ ವಿಫಲತೆಯನ್ನು ಕೂಡ ಶಾಸಕರ ಗಮನಕ್ಕೆ ತಂದಾಗ ಮುಂದಿನ ದಿನಗಳಲ್ಲಿ ಅಂತಹ ಅವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಸರಿಪಡಿಸುವ ಭರವಸೆಯನ್ನು ನೀಡಿದ್ದಾರೆ.
ಪಶ್ಚಿಮ ವಲಯದ ಸಂಯೋಜಕರಾದ ಕೆ.ಪಿ ಇಬ್ರಾಹಿಂ ಕಣ್ಣಂಗಾರ್ ಅವರ ನೇತೃತ್ವದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹತ್ತು ಘಟಕಗಳ ಪ್ರತಿನಿಧಿಗಳು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ