ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಈಚಿನ ವರ್ಷಗಳಲ್ಲಿ ಅತ್ಯಂತ ಕೆಟ್ಟ ಚಂಡಮಾರುತ ಎಂದು ಹೇಳಲಾದ ಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳ ಕರಾವಳಿಯನ್ನು ಸಮೀಪಿಸುತ್ತಿದೆ. ನಿನ್ನೆಯಷ್ಟೇ ಅಂಫಾನ್ ಚಂಡಮಾರುತದ ಸ್ಥಿತಿಯನ್ನು ‘ಸೂಪರ್ ಚಂಡಮಾರುತ’ದಿಂದ ‘ಅತಿ ಗಂಭೀರ ಚಂಡಮಾರುತ’ ಸ್ಥಿತಿಗೆ ಹವಾಮಾನ ಇಲಾಖೆ ಇಳಿಸಿತ್ತು.
ಚಂಡಮಾರುತದ ಮೋಡಗಳಿಂದಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಭಾರಿ ಮಳೆ ಆರಂಭವಾಗಿದ್ದು, ಬಿರುಗಾಳಿ ಬೀಸುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಚಂಡಮಾರುತವು ತೀರಕ್ಕೆ ಅಪ್ಪಳಿಸಿದಾಗ ಭಾರೀ ಹಾನಿ ಸಂಭವಿಸಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಪಶ್ಚಿಮ ಬಂಗಾಳದ ದಿಘಾ ಮತ್ತು ಬಾಂಗ್ಲಾದೇಶದ ಹತಿಯಾ ನಡುವಣ ಪ್ರದೇಶದಲ್ಲಿ ಚಂಡಮಾರುತವು ತೀರವನ್ನು ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿದೆ. ಈ ವೇಳೆ ಗಂಟೆಗೆ 185 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಮಾಹಿತಿ ಸಂಗ್ರಹ ವೈಜ್ಞಾನಿಕವಾಗಿ ಆರಂಭವಾದ ನಂತರ ಹಿಂದೂ ಮಹಾಸಾಗರದ ಈಶಾನ್ಯ ಭಾಗದಲ್ಲಿ ರೂಪುಗೊಂಡ ಮೊದಲ ‘ಸೂಪರ್ ಸೈಕ್ಲೋನ್’ ಇದು. ಬಂಗಾಳ ಕೊಲ್ಲಿಯಲ್ಲಿ ನೌಕಾಪಡೆಯು ಕಟ್ಟೆಚ್ಚರ ಸ್ಥಿತಿಯಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಕೋವಿಡ್ ಸೋಂಕು ವ್ಯಾಪಕವಾಗಿ ಇರುವ ಸಂದರ್ಭದಲ್ಲೇ ಚಂಡಮಾರುತ ಬಂದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ. ಶಿಬಿರಗಳಲ್ಲಿ ಅಂತರ ಕಾಯ್ದುಕೊಳ್ಳುವಿಕೆಯನ್ನು ನಿರ್ವಹಿಸಲು ಎನ್ಡಿಆರ್ಎಫ್ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಸುಮಾರು 10 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಒಡಿಶಾ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.
ಏನಿದು ಅಂಫಾನ್ :ಅಂಫಾನ್ ಎಂಬ ಪದವು ಅಂ-ಪನ್ ಎಂಬ ಪದದಿಂದ ನಿಷ್ಪನ್ನಗೊಂಡಿದೆ. ಈ ಹೆಸರನ್ನು ಥಾಯ್ಲೆಂಡ್ 2004ರಲ್ಲಿ ನೀಡಿತು. ವಿಶಾಖಪಟ್ಟಣದಲ್ಲಿರುವ ಡಾಪ್ಲಾರ್ ಹವಾಮಾನ ರಾಡಾರ್ ಮೂಲಕ ಈ ಮಾರುತದ ಮೇಲೆ ನಿರಂತರ ನಿಗಾ ಇರಿಸಲಾಗಿತ್ತು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ