ಕೋಲಾರ: ಕಾನೂನು ಸಚಿವ ಪಿ. ಮಾಧುಸ್ವಾಮಿ ವಿರುದ್ಧ ಟ್ವಿಟರ್ನಲ್ಲಿ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ” ಎಂದು ಕಿಡಿಕಾರಿದ್ದಾರೆ. ಅಲ್ಲದೆ, ಸಚಿವರ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, “ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂಧಿಸಿರುವುದು ದುರ್ವರ್ತನೆ ಮತ್ತು ಅಕ್ಷಮ್ಯ. ಹೀಗಾಗಿ ಸಚಿವರು ತಕ್ಷಣ ಆ ರೈತ ಮಹಿಳೆಯ ಕ್ಷಮೆ ಯಾಚಿಸಬೇಕು. ಅವರನ್ನು ಸಂಪುಟದಿಂದ ಕೈ ಬಿಟ್ಟು ಸರ್ಕಾರದ ಮಾನ ಉಳಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಿಸಾನ್ ಘಟಕ ಸಹ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿದೆ.
ನಡೆದದ್ದೇನು?
ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಇಂದು ಕೋಲಾರಕ್ಕೆ ಆಗಮಿಸಿದ್ದರು. ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾದ್ಯಕ್ಷೆ ನಳಿನಿ ಗೌಡ ಹಾಗೂ ಮತ್ತೊರ್ವ ಮಹಿಳಾ ಹೋರಾಟಗಾರ್ತಿ ಸಚಿವರಿಗೆ ಮನವಿ ನೀಡಲು ಮುಂದಾದರು. ಅಲ್ಲದೆ, “ದಯವಿಟ್ಟು ಅಗ್ರಹಾರ ಕೆರೆಯಲ್ಲಿನ ಒತ್ತುವರಿಯನ್ನು ತೆರವುಗೊಳಿಸಿ” ಎಂದು ಸಚಿವರ ಬಳಿ ವಿನಂತಿಸಿಕೊಂಡಿದ್ದರು. ಆದರೆ, ಈ ವೇಳೆ ಗರಂ ಆದ ಸಚಿವರು “ನೀನು ತೆರವು ಮಾಡ್ತೀಯೇನಮ್ಮ” ಎಂದು ಗದರಿಸಲು ಶುರು ಮಾಡಿದ್ದರು.
ಸಚಿವರ ಮಾತಿಗೆ ಉತ್ತರಿಸಿದ್ದ ರೈತ ಮಹಿಳಾ, “ಅದು ನಮ್ಮ ಕೆಲಸ ಅಲ್ಲಾ ಸಾರ್..! ನಿಮ್ಮ ಕೆಲಸ ಅದನ್ನು ನೀವು ಮಾಡಿ” ಎಂದದ್ದೇ ತಪ್ಪಾಯಿತೇನೋ? ಕೂಡಲೇ ತಾಳ್ಮೆ ಕಳೆದುಕೊಂಡು ಕೆಂಡಾಮಂಡಲವಾದ ಸಚಿವ ಮಾಧುಸ್ವಾಮಿ, “ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್” ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಅಲ್ಲದೆ, ಪೊಲೀಸ್ ಅಧಿಕಾರಿಗಳನ್ನು ಕರೆದು ಕೂಡಲೇ ಇಬ್ಬರೂ ಮಹಿಳೆಯರನ್ನೂ ಅಲ್ಲಿಂದ ಒತ್ತಾಯಪೂರ್ವಕವಾಗಿ ಹೊರಹಾಕಿಸಿದ್ದಾರೆ.
ನೂರಾರು ಜನ ಹಾಗೂ ಸ್ವತಃ ಪೊಲೀಸರ ಎದುರು ಕಾನೂನು ಸಚಿವ ರೈತ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿರುವುದು ಇದೀಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಘಟಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಕೂಡಲೇ ಸಚಿವ ಮಾಧುಸ್ವಾಮಿ ಕ್ಷಮೆ ಕೇಳಬೇಕು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಹೀಗಾಗಿ ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕ ಮತ್ತು ಸಿಎಂ ಯಡಿಯೂರಪ್ಪ ಯಾವ ತೀರ್ಮಾನ ತೆಗೆದುಕೊಳ್ಳಲಿದ್ದಾರೆ? ಎಂಬುದನ್ನು ಕಾದುನೋಡಬೇಕಿದೆ















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ