ಚಿಕ್ಕಮಗಳೂರು:ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಸಮಿತಿ ಕೇಂದ್ರ ಕಛೇರಿಯಲ್ಲಿ ಮೇ.22 ರಂದು ಜಿಲ್ಲಾ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಶಾಹಿದರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ದಿನಾಂಕ 24 ಅಥವಾ 25 ಮೇ ರಂದು ನಡೆಯಲಿರುವ ರಂಜಾನ್ ಈದ್ ಅನ್ನು ಈ ಬಾರಿ ರಾಜ್ಯ ಸರ್ಕಾರದ ಮಾರ್ಗದರ್ಶನವನ್ನು ಅನುಸರಿಸಿಕೊಂಡು ಜಿಲ್ಲಾ ಆಡಳಿತಕ್ಕೆ ಸಹಕಾರ ಕೊಟ್ಟು ಸರಳವಾಗಿ ಆಚರಿಸಬೇಕೆಂದು ಜಿಲ್ಲೆಯ ಎಲ್ಲಾ ಮಸೀದಿ ಆಡಳಿತ ಸಮಿತಿಯವರಿಗೆ ಮನವರಿಕೆ ಮಾಡಲಾಗುವುದು.
ಆಯಾ ಪ್ರದೇಶದ ಮಸಿದಿಗಳ ಅಧ್ಯಕ್ಷರು ಮತ್ತು ಇಮಾಮ್ರವರು ಸಾರ್ವಜನಿಕರಲ್ಲಿ ಮನವರಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲಾಯಿತು . ಈ ಸಂದರ್ಭದಲ್ಲಿ ಕಾರ್ಯದರ್ಶಿಯವರಾದ ಹಾಜಿ ಫೈರೋಜ್ ಅಹಮ್ಮದ್ ರರವರು ಮಾತನಾಡಿ ಈ ಬಾರಿ ರಂಜಾನ್ ಹಬ್ಬದ ವಿಶೇಷ ನಮಾಜ್ ಅನ್ನು ಯಾವುದೇ ಮಸೀದಿ ಅಥವಾ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲವಾದ್ದರಿಂದ ಎಲ್ಲಾ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ದಿನ ತಮ್ಮ ತಮ್ಮ ಮನೆಯಲ್ಲಿಯೇ ನಮಾಜ್ ನಿರ್ವಹಿಸಬೇಕೆಂದು ಸರ್ಕಾರ ಮತ್ತು ಆರೋಗ್ಯ ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸರ್ಕಾರದೊಂದಿಗೆ ಸಹಕರಿಸಬೇಕಾಗಿ ಕರೆ ಕೊಡಲಾಯಿತು .
ಈ ಸಭೆಯಲ್ಲಿ ಸಮಿತಿಯ ಸಹಕಾರ್ಯದರ್ಶಿ ಮುನೀರ್ ಅಹಮ್ಮದ್ . ಚಿಕ್ಕಮಗಳೂರು ತಾಲ್ಲೂಕು ಸಮಿತಿಯ ಅಧ್ಯಕ್ಷರಾದ ಆರಿಫ್ ಅಲಿಖಾನ್ ಇನ್ನಿತರೆ ಧಾರ್ಮಿಕ ಮೂಖಂಡರು ಹಾಗೂ ಸುನ್ನಿ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು .















ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು ಸಲಾಂ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು: ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಗೆ ಸನ್ಮಾನ
ಚಿಕ್ಕಮಗಳೂರು: ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಸಮಾರಂಭ
ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ- ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರವಾದಿ ನಿಂದನೆ- ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಚಿಕ್ಕಮಗಳೂರು ಮುಸ್ಲಿಂ ಜಮಾಅತ್ ಒತ್ತಾಯ
ಬಜರಂಗದಳ ಪುಂಡಾಟಿಕೆ : ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಗಣರಾಜ್ಯೋತ್ಸವ
ಚಿಕ್ಕಮಗಳೂರು ನಗರ ಸಭೆ ಚುನಾವಣೆ: ಮೊದಲ ಹಂತದ SDPI ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕಮಗಳೂರು: ಜಾಮಿಯಾ ಕಂಜುಲ್ ಇಮಾನ್ ನಿಂದ ಸ್ವಾತಂತ್ರ್ಯ ದಿನಾಚರಣೆ
ಜಾಮಿಯಾ ಕಂಝುಲ್ ಇಮಾನ್ ಚಿಕ್ಕಮಗಳೂರು: ಗಣರಾಜ್ಯೋತ್ಸವ ಆಚರಣೆ