ಬಂಟ್ವಾಳ ತಾಲೂಕು ಮುಸ್ಲಿಂ ಜಮಾತ್ ವತಿಯಿಂದ ನೂರಾರು ನಿರ್ಗತಿಕ ಕುಟುಂಬಗಳಿಗೆಈದ್ ಕಿಟ್ ವಿತರಿಸಲಾಯಿತು .ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಖಫ್ ಮಂಡಳಿ ಸದಸ್ಯ ಮೌಲಾನ ಶಾಫಿ ಸಅದಿ ಮುಖ್ಯ ಅತಿಥಿಯಾಗಿ ಬಾಗವಹಿಸಿ ಮಾತನಾಡಿದರು .
ಮುಂದಿನ ದಿನಗಳಲ್ಲಿ ತಾಲೂಕು ಮುಸ್ಲಿಂ ಸಮಿತಿಯು,ಸಮಾಜದ ಎಲ್ಲಾ ವರ್ಗದ ನಾಯಕರನ್ನು ಸೇರಿಸಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸಾಮಾಜಿಕ-ಆರ್ಥಿಕ ಧಾರ್ಮಿಕಅಭಿವೃದ್ಧಿಗೆ ಶ್ರಮಿಸಬೇಕು.ಸಮಾಜ ಮತ್ತು ಸಮುದಾಯದ ಒಗ್ಗಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿ,ಧಾರ್ಮಿಕ ಸೌಹಾರ್ದತೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದರು.
ತಾಲೂಕು ಮುಸ್ಲಿಂ ಜಮಾತ್ ಅಧ್ಯಕ್ಷ ತೌಫಿಕ್ ರಫೀಕ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಅನ್ವರ್ ಗೂಡಿನಬಳಿ,ಉಪಾಧ್ಯಕ್ಷರುಗಳಾದ ಬಶೀರ್ ಹಾಜಿ ಕುಂಬ್ರಮುತ್ತಲಿಬ್ ಹಾಜಿ ನಾರ್ಶ,ಇಸ್ಮೈಲ್ ಬಂಟ್ವಾಳ ರಶೀದ್ ಒಗ್ಗ,ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಉಸ್ಮಾನ್ ಹಾಜಿ ಅಬೂಬಕರ್ ಕಡೇಶಿವಾಲಯ ಮುಂತಾದವರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ