ಮಂಗಳೂರು: ಇಲ್ಲಿನ ಪಂಪ್ ವೆಲ್ ಸರ್ಕಲ್ ಗೆ ಮಹಾವೀರ ವೃತ್ತ ಎಂದು ಹೆಸರು ಇಡಲಾಗಿದೆ. ಮತ್ತೆ ಸಾವರ್ಕರ್ ಹೆಸರಲ್ಲಿ ಫ್ಲೆಕ್ಸ್ ಹಾಕಿದವರ ವಿರುದ್ಧ ಸರ್ಕಾರ, ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಫ್ಲೆಕ್ಸ್ ಹಾಕಿದವರನ್ನು ಪತ್ತೆಹಚ್ಚದಿದ್ದರೆ ಅದು ಪೊಲೀಸರ ವೈಫಲ್ಯವಾಗುತ್ತದೆ. ಪತ್ತೆ ಹಚ್ಚದಿದ್ರೆ ಸಂಸದರ, ಶಾಸಕರು ಕಿಡಿಗೇಡಿಗಳಿಗೆ ಬೆಂಬಲ ಕೊಟ್ಟಂತೆ ಆಗುತ್ತಿದೆ. ಕಿಡಿಗೇಡಿಗಳನ್ನು ಪತ್ತೆಹಚ್ಚುವ ಕಾರ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ಬಿಡುತ್ತಿದ್ದೇನೆ, ಜನರು ಈ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದರು.
ಸರ್ಕಾರಿ ಆಸ್ಪತ್ರೆ ಇಲ್ಲ- ಬಡವರಿಗೆ ಸಂಕಷ್ಟ
ದಕ್ಷಿಣ ಕನ್ನಡ ಜಿಲ್ಲೆಗೆ ಈಗ ಸರ್ಕಾರಿ ಆಸ್ಪತ್ರೆಯಿಲ್ಲ. ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡಿದ್ದಾರೆ. ವೆನ್ಲಾಕ್ ಆಸ್ಪತ್ರೆ ಖಾಲಿ ಮಾಡುವಾಗ ಹೇಳಿಲ್ಲ ಈಗ ಬಡವರ್ಗದ ಜನ ಸಂಕಷ್ಟ ಪಡುತ್ತಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಹಣ ಕಟ್ಟಲು ಆಗಲ್ಲ. ಬೆಂಗಳೂರಿನ ರೀತಿ ಮಂಗಳೂರು ಅಲ್ಲ, ಬೆಂಗಳೂರಿನಲ್ಲಿ 10 ಸರ್ಕಾರಿ ಆಸ್ಪತ್ರೆ ಇದೆ, ಮಂಗಳೂರಿನಲ್ಲಿ ಇರುವುದು ಒಂದೇ ಸರ್ಕಾರಿ ಆಸ್ಪತ್ರೆ. ವೆನ್ಲಾಕ್ ತಕ್ಷಣ ಒಪಿಡಿ ಆರಂಭ ಮಾಡಬೇಕು, ಜಿಲ್ಲಾಡಳಿತ ಬಡವರ ಕಷ್ಟವನ್ನು ಅರಿಯಬೇಕು ಎಂದು ಖಾದರ್ ಆಗ್ರಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್