ನವದೆಹಲಿ: ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಈ ವರ್ಷ ಹಜ್ ಯಾತ್ರೆಯನ್ನು ರದ್ದು ಪಡಿಸಲು ಇಚ್ಛಿಸುವವರು ಪಾವತಿಸಿದ ಪೂರ್ಣ ಮೊತ್ತವನ್ನು ಮರು ಪಾವತಿಸಲಾಗುವುದು ಎಂದು ಕೇಂದ್ರ ಹಜ್ ಸಮಿತಿ ವ್ಯಕ್ತಪಡಿಸಿದೆ.
ದೇಶಾದ್ಯಂತ ಕೊರೋನಾ ಹಬ್ಬಿರುವ ಕಾರಣ ಈ ವರ್ಷ ಹಜ್ ಯಾತ್ರೆ ನಡೆಸುವ ಬಗ್ಗೆ ಅನುಮಾನ ಉಂಟಾಗಿದೆ. ಸಾಮಾನ್ಯವಾಗಿ ಹಜ್ ಯಾತ್ರೆ ಪೂರ್ವ ಸಿದ್ಧತೆಗಳು ಈಗಾಗಲೇ ನಡೆಯಬೇಕಿತ್ತು. ಆದ್ರೆ ಇದುವರೆಗೂ ಹಜ್ ಯಾತ್ರೆ ಬಗ್ಗೆ ಸೌದಿ ಅರೇಬಿಯಾ ಸರ್ಕಾರ ಯಾವುದೇ ನಿರ್ಧಾರಗಳನ್ನು ಕೈಗೊಂಡಿಲ್ಲ. ಹೀಗಾಗಿ ಹಜ್ ಯಾತ್ರೆಗೆಂದು ಮುಂಗಡವಾಗಿ ಸಂಗ್ರಹಿಸಿದ್ದ ಹಣವನ್ನು ವಾಪಸ್ ನೀಡಲು ಭಾರತದ ಹಜ್ ಸಮಿತಿ ಮುಂದಾಗಿದೆ.
ಹಜ್ಜ್ ಯಾತ್ರೆ ರದ್ದು ಪಡಿಸುವವರಿಗೆ ಅವರು ಕಟ್ಟಿದ ಪೂರ್ಣ ಹಣವನ್ನು ಮರುಪಾವತಿಸಲಾಗುವುದು ಎಂದು ಕೇಂದ್ರ ಹಜ್ಜ್ ಕಮಿಟಿ ಎಕ್ಸಿಕ್ಯೂಟಿವ್ ಆಫಿಸರ್ ಡಾ. ಮಕ್ಸೂದ್ ಅಹ್ಮದ್ ಖಾನ್ ರವರು ಸೂಚನೆ ನೀಡಿದ್ದಾರೆ.
ಭಾರತದಿಂದ ಹಜ್ಜ್ಗೆ ವಿಮಾನ ಯಾನವನ್ನು ಜೂನ್ನ ಎರಡನೇ ವಾರದಿಂದ ಆರಂಭಿಸಬೇಕಾಗಿತ್ತು. ಆದರೆ ಕೊರೋನಾ ಪರಿಸ್ಥಿತಿಯಲ್ಲಿ ಬಹಳ ಸಮಯದಿಂದ ಸೌದಿ ಹಜ್ಜ್ ಸಚಿವಾಲಯದಿಂದ ಕೇಂದ್ರ ಹಜ್ಜ್ ಕಮಿಟಿಗೆ ಯಾವುದೇ ವಿವರ ಲಭ್ಯವಾಗುತ್ತಿಲ್ಲ.
ಈ ಬಗ್ಗೆ ಮಾಹಿತಿ ನೀಡಿರುವ ಭಾರತ ಹಜ್ ಸಮಿತಿಯ ಸಿಇಒ ಮಕ್ಸೂದ್ ಅಹಮ್ಮದ್ ಖಾನ್, ಮಾರ್ಚ್ 13 ರಂದು ಸೌದಿ ಸರ್ಕಾರ ಈ ವರ್ಷದ ಹಜ್ ಯಾತ್ರೆಯ ಸಿದ್ಧತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಿತ್ತು. ಸದ್ಯ ಹಜ್ ಯಾತ್ರೆಯ ಪೂರ್ವಸಿದ್ಧತೆಗೆ ಇನ್ನು ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿವೆ. ಆದ್ರೆ ಇಲ್ಲಿವರೆಗೂ ಸೌದಿ ಸರ್ಕಾರ ಯಾವುದೇ ಸೂಚನೆಗಳನ್ನು ನೀಡಿಲ್ಲ.
ಹೀಗಾಗಿ ಮುಂಗಡವಾಗಿ ಹಣ ಪಾವತಿಸಿದ್ದ ಎಲ್ಲರಿಗೂ ಪೂರ್ಣ ಪ್ರಮಾಣದ ಹಣವನ್ನು ಮರು ಪಾವತಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಮುಂಗಡವಾಗಿ ಹಣ ಪಾವತಿಸಿದ ಹಣವನ್ನು ವಾಪಸ್ ಪಡೆಯಲು ಸಮಿತಿಯ ವೆಬ್ಸೈಟ್ನಲ್ಲಿ ಲಭ್ಯವಿರುವ ಒಂದು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ ಎಂದು ಮಕ್ಸೂದ್ ಅಹಮ್ಮದ್ ಖಾನ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ