ದೋಹಾ: ವಿಶ್ವಾದ್ಯಂತ ಕೋವಿಡ್ ಹರಡಿರುವ ಕಾರಣ ಹಲವು ವಿದೇಶ ರಾಷ್ಟ್ರಗಳಲ್ಲಿ ಅನಿವಾಸಿಗಳು ಸಂಕಷ್ಟದಲ್ಲಿದ್ದು, ಕೈಯಲ್ಲಿ ಹಣವೂ ಇಲ್ಲ, ಒಪ್ಪೊತ್ತಿಗೆ ಊಟವೂ ಇಲ್ಲ, ಕೆಲವು ಕಂಪನಿಗಳನ್ನು ಮುಚ್ಚಿದ ಕಾರಣ ಕೆಲಸವನ್ನೂ ಕಳಕೊಂಡು ತವರಿಗೆ ಮರಳಲು ಭಾರತ ಸರ್ಕಾರದ ವಿಶೇಷ ವಿಮಾನವನ್ನು ಎದುರು ನೋಡುತ್ತಿದ್ದಾರೆ.
ಯುಎಇ ,ಸೌದಿ, ಕುವೈಟ್, ಬಹರೈನ್ ಮುಂತಾದ ಕಡೆಗಳಿಂದ ಸಾವಿರಾರು ಮಂದಿ ಈಗಾಗಲೇ ತಾಯಿನಾಡು ಸೇರಿದ್ದು, ಇದೀಗ ಕತಾರ್ನಲ್ಲೂ ಕನ್ನಡಿಗರು ಸಂಕಷ್ಟದಲ್ಲಿದ್ದು ಬೆಂಗಳೂರು ಹಾಗೂ ಮಂಗಳೂರಿಗೆ ಹೆಚ್ಚುವರಿ ವಿಮಾನ ಯಾನ ಸೌಲಭ್ಯವನ್ನು ಒಗದಿಸಿಕೊಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕತಾರಿನಲ್ಲಿರುವ ಐ.ಸಿ.ಬಿ.ಎಫ್ (ಭಾರತೀಯ ಸಮುದಾಯ ಹಿತೈಷಿ ಸಮಿತಿ) ಸಂಸ್ಥೆಯ ವತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಈ ಕುರಿತಾಗಿ ಮನವಿಯನ್ನು ಸಲ್ಲಿಸಿದ್ದು ಕನ್ನಡಿಗರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೋರಲಾಗಿದೆ.
ಕೊರೊನಾ ಕಾರಣದಿಂದ ವಿದೇಶದಲ್ಲಿರುವ ಕನ್ನಡಿಗರಿಗೆ ಸರ್ಕಾರ ಸ್ಪಂದಿಸಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ವಿಮಾನ ಸೇವೆಯನ್ನು ಕಲ್ಪಿಸಿದೆ. “ಒಂದೇ ಭಾರತ ನಿಯೋಗ”ದ ಅಡಿಯಲ್ಲಿ ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನವನ್ನು ನಿಗದಿಪಡಿಸಿ ಹಾರಲು ವ್ಯವಸ್ಥೆ ಮಾಡಲಾಗಿದೆ. ಆದರೆ ಕತಾರ್ನಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರು ಕೆಲಸ ಕಳೆದುಕೊಂಡು, ಜೀವನ ನಡೆಸಲು ಪರದಾಡುತ್ತಿದ್ದಾರೆ. ಅವರೆಲ್ಲಾ ತಾಯ್ನಾಡಿಗೆ ಹಿಂತಿರುಗಲು ತಯಾರಾಗಿದ್ದಾರೆ.
ಇಂತವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚುವರಿ ವಿಮಾನ ಯಾನ ಸೌಲಭ್ಯವನ್ನು ಒದಗಿಸಿಕೊಡಬೇಕು ಎಂದು ಭಾರತೀಯ ಸಮುದಾಯ ಹಿತೈಷಿ ಸಮಿತಿ ಪ್ರತಿನಿಧಿ ಸುಬ್ರಮಣ್ಯ ಹೆಬ್ಬಾಗಿಲು ವಿನಂತಿಸಿದ್ದಾರೆ. ಈ ಕುರಿತಾಗಿ ಅನಿವಾಸಿ ಕನ್ನಡಿಗರು ಕೇಂದ್ರ ಸಚಿವ ಸದಾನಂದಗೌಡ, ಸುರೇಶ ಅಂಗಡಿ, ಸಿಎಂ ಬಿ.ಎಸ್. ಯಡಿಯೂರಪ್ಪಅವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರನ್ನು ಕತಾರಿನಿಂದ ಮಾತೃಭೂಮಿಗೆ ಹಿಂತಿರುಗಲು ವಿಮಾನದ ವ್ಯವಸ್ಥೆ ಮಾಡುವಂತೆ ವಿನಂತಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ