ಮಂಗಳೂರು: ಲಾಕ್ ಡೌನ್ ಸಮಯದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಈಡಾಗಿದ್ದ ಮಂಗಳೂರು -ಕಾಸರಗೋಡು ಗಡಿ ಪ್ರವೇಶ, ಇದೀಗ ಸಂಚಾರ ಪಾಸ್ ಗೊಂದಲಕ್ಕೆ ಸಿಲುಕಿದೆ.
ದೈನಂದಿನ ಚಟುವಟಿಕೆಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಕಾಸರಗೋಡು ಕನ್ನಡಿಗರಿಗೆ ತುರ್ತು ಪಾಸ್ ನೀಡುವುದಕ್ಕಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಗಡಿ ತಲಪಾಡಿಯಲ್ಲಿ 3 ಸಹಾಯ ಕೇಂದ್ರಗಳನ್ನು (ಹೆಲ್ಪ್ ಡೆಸ್ಕ್) ಸ್ಥಾಪಿಸಿ, ಅಲ್ಲಿಯೇ ಪಾಸ್ ವಿತರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.
ಮತ್ತೆ ಸಮಸ್ಯೆಗಳು ಏನಾದರೂ ಬಂದರೆ ತನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಕಾಸರಗೋಡು ಕನ್ನಡಿಗರಿಗೆ ಅವರು ಮನವಿ ಮಾಡಿದ್ದಾರೆ.
2 ಜಿಲ್ಲೆಗಳ ನಡುವೆ ನಿತ್ಯ ಓಡಾಡುವವರಿಗೆ ಸಮರ್ಪಕ ಪಾಸ್ ವಿತರಣೆ ಆಗದೆ ಗೊಂದಲ ಏರ್ಪಟ್ಟಿತ್ತು. ಕಾಸರಗೋಡು ಕಡೆಯಿಂದ ಸುಮಾರು 2000ಕ್ಕೂ ಹೆಚ್ಚು ಅರ್ಜಿಗಳು ಪಾಸ್ಗಾಗಿ ಬಂದಿದ್ದು, ಭಾನುವಾರ ತನಕ 400 ಪಾಸ್ಗಳ ವಿತರಣೆಯಾಗಿವೆ. ಉಳಿದ ಅರ್ಜಿಗಳು ಆಧಾರ್ ಕಾರ್ಡ್ ಸಹಿತ ಸಮರ್ಪಕ ದಾಖಲೆಗಳು ಇಲ್ಲವೆಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪಾಸ್ ವಿತರಣೆಯನ್ನು ಸ್ಥಗಿತಗೊಳಿಸಿತ್ತು ಎಂದು ಮೂಲಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್