ಮಸ್ಕತ್: ಭಾರತ ಸರಕಾರವು ವಿದೇಶ ಪ್ರಯಾಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಇದರ ಅನ್ವಯ ಕೊವಿಡ್ 19 ನಿಂದಾಗಿ ದೇಶದಲ್ಲಿ ಅತಂತ್ರರಾಗಿರುವ ಕನಿಷ್ಟ ಮೂರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ವಿಸಾ ಅವಧಿಯನ್ನು ಹೊಂದಿರುವ ಅನಿವಾಸಿ ಭಾರತೀಯರಿಗಷ್ಟೇ ವಿದೇಶ ಪ್ರಯಾಣ ಕೈಗೊಳ್ಳಬಹುದಾಗಿದೆ.
ಈ ಪರಿಷ್ಕೃತ ಮಾರ್ಗಸೂಚಿಯಿಂದಾಗಿ ರಜೆ, ಶುಭ ಸಮಾರಂಭ ಮತ್ತಿತರ ಕಾರಣಗಳಿಗಾಗಿ ಕುಟುಂಬಿಕರನ್ನು ಸೇರಿಕೊಳ್ಳಲು ಊರಿಗೆ ಆಗಮಿಸಿ ಕೊರೋನಾ ಕಾರಣದಿಂದ ವಿಮಾನಯಾನವನ್ನು ಸರಕಾರ ಸ್ಥಗಿತಗೊಳಿಸಿದ್ದರ ಪರಿಣಾಮ ಕರ್ಮಭೂಮಿಗೆ ಪ್ರಯಾಣಿಸಲು ಸಾಧ್ಯವಾಗದೇ ಲಕ್ಷಾಂತರ ಅನಿವಾಸಿಗಳು ಅತಂತ್ರರಾಗಿದ್ದಾರೆ. ಮುಖ್ಯವಾಗಿ UAE ದೇಶವು ಡಿಸೆಂಬರ್ ವರೆಗೆ ವಿಸಾ ಅವಧಿಯನ್ನು ವಿಸ್ತರಿಸಿದ್ದರೂ, ಭಾರತ ಸರಕಾರದ ಈ ಮಾರ್ಗಸೂಚಿಯಿಂದಾಗಿ ವಿದೇಶ ಪ್ರಯಾಣ ಕೈಗೊಳ್ಳುವುದು ಅಸಾಧ್ಯವಾಗಲಿದೆ.
ಆದುದರಿಂದ ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಗಮನಹರಿಸಿ ಈ ಸುತ್ತೋಲೆಗೆ ತಡೆಹಿಡಿಯಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್(KCF) ಒಮಾನ್ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ