ಮಸ್ಕತ್: ಭಾರತ ಸರಕಾರವು ವಿದೇಶ ಪ್ರಯಾಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಇದರ ಅನ್ವಯ ಕೊವಿಡ್ 19 ನಿಂದಾಗಿ ದೇಶದಲ್ಲಿ ಅತಂತ್ರರಾಗಿರುವ ಕನಿಷ್ಟ ಮೂರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ವಿಸಾ ಅವಧಿಯನ್ನು ಹೊಂದಿರುವ ಅನಿವಾಸಿ ಭಾರತೀಯರಿಗಷ್ಟೇ ವಿದೇಶ ಪ್ರಯಾಣ ಕೈಗೊಳ್ಳಬಹುದಾಗಿದೆ.
ಈ ಪರಿಷ್ಕೃತ ಮಾರ್ಗಸೂಚಿಯಿಂದಾಗಿ ರಜೆ, ಶುಭ ಸಮಾರಂಭ ಮತ್ತಿತರ ಕಾರಣಗಳಿಗಾಗಿ ಕುಟುಂಬಿಕರನ್ನು ಸೇರಿಕೊಳ್ಳಲು ಊರಿಗೆ ಆಗಮಿಸಿ ಕೊರೋನಾ ಕಾರಣದಿಂದ ವಿಮಾನಯಾನವನ್ನು ಸರಕಾರ ಸ್ಥಗಿತಗೊಳಿಸಿದ್ದರ ಪರಿಣಾಮ ಕರ್ಮಭೂಮಿಗೆ ಪ್ರಯಾಣಿಸಲು ಸಾಧ್ಯವಾಗದೇ ಲಕ್ಷಾಂತರ ಅನಿವಾಸಿಗಳು ಅತಂತ್ರರಾಗಿದ್ದಾರೆ. ಮುಖ್ಯವಾಗಿ UAE ದೇಶವು ಡಿಸೆಂಬರ್ ವರೆಗೆ ವಿಸಾ ಅವಧಿಯನ್ನು ವಿಸ್ತರಿಸಿದ್ದರೂ, ಭಾರತ ಸರಕಾರದ ಈ ಮಾರ್ಗಸೂಚಿಯಿಂದಾಗಿ ವಿದೇಶ ಪ್ರಯಾಣ ಕೈಗೊಳ್ಳುವುದು ಅಸಾಧ್ಯವಾಗಲಿದೆ.
ಆದುದರಿಂದ ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಗಮನಹರಿಸಿ ಈ ಸುತ್ತೋಲೆಗೆ ತಡೆಹಿಡಿಯಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್(KCF) ಒಮಾನ್ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು