ದಮ್ಮಾಮ್: ಕೋವಿಡ್ 19 ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಂಕಷ್ಟದಲ್ಲಿರು ಭಾರತೀಯರನ್ನು ತಾಯಿನಾಡಿಗೆ ಕರೆತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದ್ದರೂ, ಇನ್ನೂ ಬಹುತೇಕ ಮಂದಿ ವಿದೇಶದಲ್ಲಿ ಅತಂತ್ರರಾಗಿ ಉಳಿದಿದ್ದಾರೆ.
ಈ ನಿಟ್ಟಿನಲ್ಲಿ ಸಾಕೋ ಕಂಪನಿಯು ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ಎಲ್ಲಾ ಖರ್ಚುವೆಚ್ಚವನ್ನು ಸಂಸ್ಥೆಯೇ ಭರಿಸಿ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸಿದೆ.
ದಮಾಮ್ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 6:30 ಕ್ಕೆ (ಸೌದಿ ಸಮಯ) ಹೊರಟ ವಿಮಾನವು ಮಂಗಳೂರಿಗೆ ರಾತ್ರಿ 1:30 ಸುಮಾರಿಗೆ ಆಗಮಿಸಲಿದೆ. ಎಂಟು ಚಿಕ್ಕ ಮಕ್ಕಳು ಸಹಿತ 175 ಅತಂತ್ರ ಕನ್ನಡಿಗರು ಇದರಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಾಕೋ ಕಂಪೆನಿಯ ನಿರ್ದೇಶಕರಾದ ಅಲ್ತಾಫ್ ಉಳ್ಳಾಲ್ ಹಾಗೂ ಬಶೀರ್ ಸಾಗರ್, ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ದಮಾಮ್ ವಿಮಾನ ನಿಲ್ದಾಣದಿಂದ 175 ಅತಂತ್ರ ಕನ್ನಡಿಗರನ್ನು ಹೊತ್ತ ವಿಮಾನವು ಇಂದು ರಾತ್ರಿ ಮಂಗಳೂರಿಗೆ ತಲುಪಲಿದೆ ಎಂದು ಹೇಳಿದ್ದಾರೆ.
ವಿಶೇಷ ಬಾಡಿಗೆ ವಿಮಾನದಲ್ಲಿ ತಮ್ಮ ಸಂಸ್ಥೆಯ ಯಾವುದೇ ಸಿಬ್ಬಂದಿ ಅಥವಾ ಸಂಬಂಧಿಕರು ಪ್ರಯಾಣ ಬೆಳೆಸುತ್ತಿಲ್ಲ; ಬದಲಾಗಿ ಸಂಕಷ್ಟದಲ್ಲಿನ ಕನ್ನಡಿಗರಿಗಾಗಿಯೇ ಈ ಬಾಡಿಗೆ ವಿಮಾನವನ್ನು ಕಳುಹಿಸಲಾಗುತ್ತಿದೆ. ಎಲ್ಲ ಪ್ರಯಾಣಿಕರ ಪ್ರಯಾಣ ವೆಚ್ಚವನ್ನು ಕಂಪೆನಿಯೇ ಭರಿಸುತ್ತಿದೆ. ಅಲ್ಲದೆ, ಮಂಗಳೂರಿನಲ್ಲಿ ಕ್ವಾರಂಟೈನ್ಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜೊತೆಗೆ ಕೊರೋನ ಪರೀಕ್ಷಾ ವೆಚ್ಚವನ್ನೂ ಸಂಸ್ಥೆಯೇ ಪಾವತಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಾಕೋ ಕಂಪೆನಿಯು ಬಾಡಿಗೆ ವಿಮಾನದಲ್ಲಿ ಪ್ರಯಾಣಿಸುವವರ ಪಟ್ಟಿ ಅಂತಿಮಗೊಳಿಸಲು ಈ ಮೊದಲು ಹೆಲ್ಪ್ ಡೆಸ್ಕ್ ಪ್ರಾರಂಭಿಸಿತ್ತು. ಇದಕ್ಕೆ ಬಂದಿದ್ದ ಕರೆಗಳ ಆಧಾರದಲ್ಲಿ ಗರ್ಭಿಣಿಯರು, ವಿಸಿಟ್ ವೀಸಾದಲ್ಲಿ ಬಂದು ಅತಂತ್ರರಾಗಿರುವ ಹಿರಿಯ ನಾಗರಿಕರು, ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಇರುವವರು, ಕೆಲಸ ಕಳೆದುಕೊಂಡು ಕಂಗಾಲಾಗಿರುವವರು, ಊರಲ್ಲಿ ನಿಕಟ ಸಂಬಂಧಿಗಳು ಮೃತಪಟ್ಟವರು ಹಾಗೂ ತೀರಾ ಇತರ ತುರ್ತು ಅಗತ್ಯ ಇರುವವರರನ್ನು ಆದ್ಯತೆಯ ಮೇಲೆ ಆಯ್ಕೆ ಮಾಡಿ ಕಳುಹಿಸಲಾಗಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ