ಕಲ್ಲಿಕೋಟೆ : ಮಸೀದಿಗಳನ್ನು ತೆರೆದು ಆರಾಧನೆ ನಿರ್ವಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಅನುಮತಿ ಕೊಟ್ಟಿರುವ ಈ ಸಂದರ್ಭದಲ್ಲಿ, ಸರ್ಕಾರದ ಆದೇಶಗಳನ್ನು ಪಾಲಿಸಿ ಮಸೀದಿಗಳನ್ನು ತೆರೆದು ಕಾರ್ಯಾಚರಿಸಬೇಕು ಎಂದು ಸಮಸ್ತ.
ಜುಮುಅ (ಶುಕ್ರವಾರ) ನಮಾಝ್ ನಿರ್ವಹಣೆಗಾಗಿ ಅಗತ್ಯವಾದ ಕಾರ್ಯಗಳನ್ನು ಮಾಡಬೇಕು ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ರಈಸುಲ್ ಉಲಮಾ ಇ ಸುಲೈಮಾನ್ ಮುಸ್ಲಿಯಾರ್ ಮತ್ತು ಪ್ರಧಾನ ಕಾರ್ಯದರ್ಶಿ ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ರವರು ಪ್ರಸ್ತಾಪಿಸಿದ್ದಾರೆ.
ಅಪರಿಚಿತರು ಭಾಗವಹಿಸಲು ಸಾಧ್ಯತೆಯಿರುವ ಪಟ್ಟಣಗಳ ಮಸೀದಿಗಳನ್ನು ತೆರೆಯದೆ ಕೆಲವು ವಾರಗಳಿಗೆ ಮುಂದೂಡುವುದಾಗಿದೆ ಉತ್ತಮ. ಅದೇ ಸಂದರ್ಭದಲ್ಲಿ ಸರ್ಕಾರದ ಆದೇಶಗಳನ್ನು ಪಾಲಿಸಿ ಹಳ್ಳಿ ಪ್ರದೇಶಗಳ ಮಸೀದಿಗಳಲ್ಲಿ ಜುಮುಅಃ ನಮಾಝ್ ಪುನರಾರಂಭಿಸಬೇಕು. ಕಾರಣ ಜುಮುಅ ನಮಾಝ್ ಅತ್ಯಂತ ಮಹತ್ವವುಳ್ಳದ್ದೂ ಕಡ್ಡಾಯ ಆರಾಧನೆಯೂ ಆಗಿರುತ್ತದೆ.
ಆರಾಧನಾಲಯಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸರಕಾರವು ಆಜ್ಞಾಪಿಸಿದಾಗ ಮುಸ್ಲಿಮರು ಸರ್ಕಾರದ ಆಜ್ಞೆಯನ್ನು ಸಂಪೂರ್ಣವಾಗಿ ಸ್ವೀಕರಿಸಿದ್ದರು. ಇದೀಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಮತಿ ನೀಡಿರುವುದರಿಂದ ತೊಂದರೆಯಾಗದಂತೆ ಜುಮುಅಃ ಆರಂಭಿಸಲು ಪ್ರಯತ್ನಿಸಬೇಕೆಂದು ಸಮಸ್ತ ನಾಯಕರು ಹೇಳಿದರು.
ಕನ್ನಡಕ್ಕೆ : mkm ಕಾಮಿಲ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ