ಸೌದಿ ಅರೇಬಿಯಾ: ದಮ್ಮಾಮಿನಲ್ಲಿ ಚಾಲಕ ವೃತ್ತಿಯಲ್ಲಿದ್ದ ಬಂಟ್ವಾಳ ತಾಲೂಕಿನ ವಿಟ್ಲ ಒಕ್ಕೆತ್ತೂರು ನಿವಾಸಿ ವಿ.ಎಸ್ ಅಬೂಬಕ್ಕರ್ (ಪುತ್ತುಚ್ಚ 60 ವ.) ಎಂಬವರು ಹೃದಯಾಘಾತದಿಂದ ಜೂನ್ 7 ರಂದು ದಮ್ಮಾಮಿನ ಸೆಂಟ್ರಲ್ ಹಾಸ್ಪಿಟಲ್ ನಲ್ಲಿ ಮೃತಪಟ್ಟಿದ್ದರು.
ತಾರೀಕು 9 ರಂದು ವಿಷಯ ತಿಳಿದ ಟೀಮ್ ಸಾಂತ್ವನ ವಿಭಾಗವು ಕೂಡಲೇ ಕಾರ್ಯಪ್ರವರ್ತರಾಗಿ ಮೃತರ ಕುಟುಂಬಸ್ಥರ ಅಪೇಕ್ಷೆಯ ಮೇರೆಗೆ, ಕೆ.ಸಿ.ಎಫ್ ದಮ್ಮಾಮ್ ಝೋನ್ ನಾಯಕರು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಪೂರ್ತಿಗೊಳಿಸಿ ದಮ್ಮಾಮಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಹಕರಿಸಿದರು.
ಹಲವಾರು ವರ್ಷಗಳಿಂದ ದಮ್ಮಾಮಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಕುಟುಂಬದ ಏಕೈಕ ಆಧಾರ ಸ್ಥಂಬವಾಗಿದ್ದರು. ಕಳೆದ ವರ್ಷವಷ್ಟೇ ತಾಯಿ ಹಾಗೂ ಸಹೋದರಿಯನ್ನು ಕಳೆದುಕೊಂಡು ತೀವ್ರವಾಗಿ ನೊಂದುಕೊಂಡಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಕೆ.ಸಿ.ಎಫ್ INC ನಾಯಕರಾದ ರೈಸ್ಕೊ ಅಬೂಬಕ್ಕರ್ ಹಾಜಿ ಹಾಗು ಝೋನ್ ಅಧ್ಯಕ್ಷರಾದ ಅಬ್ದುರ್ರಶೀದ್ ಸಖಾಫಿಯವರ ನೇತ್ರತ್ವದಲ್ಲಿ ಕ್ಲಪ್ತ ಸಮಯಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ದಮ್ಮಾಂ ಕೆ.ಸಿ.ಎಫ್ ರಿಲೀಫ್ ಕನ್ವೀನರ್ ಬಾಷಾ ಗಂಗಾವಳಿ, ಕೆಸಿಎಫ್ ಸೌದಿ ರಾಷ್ಟ್ರೀಯ ಸಾಂತ್ವನ ವಿಭಾಗದ ಚೆಯರ್ಮೇನ್ ಮೊಹಮ್ಮದ್ ಮಲೆಬೆಟ್ಟು, ಸರಿಪಡಿಸಿಕೊಡಲು ಸಹಕರಿಸಿದರು. ಮೃತರ ಧಫನ್ ಕಾರ್ಯದಲ್ಲಿ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ