ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸುವಂತೆ ಅವರು ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹಠಕ್ಕೆ ಬಿದ್ದು ಎಸ್ಎಸ್ಎಲ್ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣ ಕಡಿಮೆ ಇದ್ದ ವೇಳೆ ಲಾಕ್ಡೌನ್ ಮಾಡಿದ್ರು. ಕೋವಿಡ್ 19 ಅಟ್ಟಹಾಸ ಮೆರೆಯುವ ವೇಳೆ ಓಪನ್ ಮಾಡಿದ್ದಾರೆ ಎಂದು ಅವರು ಹೇಳಿದರು.
ಎಸ್ಎಸ್ಎಲ್ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ ಭವಿಷ್ಯದ ಪ್ರಶ್ನೆ ಎದುರಾಗಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಪ್ರಾಥಮಿಕ ಹಂತದಿಂದ ಡಿಗ್ರಿಯವರೆಗೂ ಆನ್ಲೈನ್ ಶಿಕ್ಷಣ ಮಾಡೋದು ಬೇಡ ಎಂದು ಅವರು ಆನ್ಲೈನ್ ಶಿಕ್ಷಣಕ್ಕೆ ವಿರೋಧ ವ್ಯಕ್ತಪಡಿಸಿದರು.
ಸದ್ಯ ಕರ್ನಾಟಕವನ್ನು ಅಮೇರಿಕಾ ಮಾಡಲು ಆಗಲ್ಲ. ಕೊರೊನಾ ವೈರಸ್ ವೇಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿಲ್ಲ. ಹೀಗಾಗಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂದು ವಾಟಾಳ್ ನಾಗರಾಜ್ ಅವರು ನುಡಿದರು.