ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದ ಭಾರತೀಯರನ್ನು ತಾಯಿನಾಡಿಗೆ ಕರೆತರಲು ಭಾರತ ಸರ್ಕಾರವು ವಂದೇಭಾರತ್ ಮಿಷನ್ ಆರಂಭಿಸಿದ್ದು, ಇದರನ್ವಯ ಜಿದ್ದಾದಿಂದ ಬೆಂಗಳೂರಿಗೆ ಇಂದು ವಿಮಾನ ಹೊರಟಿದೆ.
ಮದೀನಾ, ಮಕ್ಕ, ತ್ವಾಯಿಫ್ ಹಾಗೂ ಜಿದ್ದಾ ಪರಿಸರದಲ್ಲಿರುವ ಅನಿವಾಸಿ ಕನ್ನಡಿಗರಲ್ಲಿ ತುರ್ತಾಗಿ ಊರಿಗೆ ಹೋಗಬೇಕಾದವರನ್ನು ಗುರುತಿಸಿ ಅವರ ಮಾಹಿತಿಯನ್ನು ರಾಯಭಾರಿ ಕಚೇರಿಗೆ ನೀಡಿ ಊರಿಗೆ ಹೋಗಲು ಅವಕಾಶ ಕಲ್ಪಿಸುವಲ್ಲಿ ಕೆಸಿಎಫ್ ಸೌದಿ ಅರೇಬಿಯಾ ಸಮಿತಿಯು ಸಕ್ರಿಯವಾಗಿ ಕಾರ್ಯ ನಿರ್ವಹಿಸಿದೆ.
ಗರ್ಭಿಣಿಯವರು, ಹಿರಿಯರು, ಮಕ್ಕಳು ಹಾಗೂ ಅನಾರೋಗ್ಯದಿಂದಿರುವವರು ಒಟ್ಟು 15 ರಷ್ಟು ಕನ್ನಡಿಗರಿಗೆ ಇವತ್ತಿನ ವಿಮಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ರಾಯಭಾರಿ ವೆಬ್ಸೈಟ್ ನಲ್ಲಿ ನೊಂದಾವಣೆ ಮಾಡುವುದರಿಂದ ಹಿಡಿದು ವಿಮಾನ ಜಿದ್ದಾದಿಂದ ಹಾರಾಟ ಆರಂಭಿಸುವಲ್ಲಿಯವರೆಗೆ ಯಾತ್ರಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದು ಅವರಿಗೆ ಬೇಕಾದ ಸಂಪೂರ್ಣ ಮಾಹಿತಿಗಳನ್ನು ನೀಡುತ್ತಿದ್ದ ಸಂಘಟನೆಯ ಈ ಸೇವೆಯನ್ನು ಯಾತ್ರಾರ್ಥಿಗಳು ಹಾಗೂ ಅವರ ಕುಟುಂಬದವರು ಮನದಾಳದಿಂದ ಅಭಿನಂದಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ