ಮಂಗಳೂರು: ಜಾಕಿ ಯಾನೆ ಝಾಕಿರ್ ಮತ್ತು ರಿಯಾಝುದ್ದೀನ್ ವಿರುದ್ಧ ಕೇಸು ದಾಖಲಿಸಿದ್ದು ನನ್ನ ಗಮನಕ್ಕೆ ಬಂದಿರಲಿಲ್ಲ ಎಂದು ಮಂಗಳೂರು ಖಾಝಿಯವರು ಸ್ಪಷ್ಟಪಡಿಸಿದ್ದಾರೆ.
ನಗರದ ಬಂದರು ನಿವಾಸಿಯೂ, ಸಮಾಜ ಸೇವಕನೂ ಆಗಿರುವ ಜಾಕಿ ಯಾನೆ ಝಾಕಿರ್ ಮತ್ತು ರಿಯಾಝ್ ವಿರುದ್ಧ ಸುಳ್ಳು ದೂರು ನೀಡಿರುವ ಪ್ರಕರಣವು ಸಾಮಾಜಿಕ ತಾಣದಲ್ಲಿ ಭಾರೀ ಚರ್ಚೆಗೆ ಗುರಿಯಾಗುತ್ತಿದ್ದಂತೆ, ಪ್ರತಿಕ್ರಿಯೆ ನೀಡಿರುವ ಬಹು: ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ ಹರಿ, ಪ್ರಕರಣ ಸಂಬಂಧಿಸಿದಂತೆ ದೂರು ದಾಖಲಿಸಿರುವ ಅಬ್ದುರ್ರಝ್ಝಾಖ್ ಅವರೊಂದಿಗೆ ವಿಚಾರಿಸಿದ್ದು” ದೂರು ದಾಖಲಿಸಲಾಗಿದೆ ಮತ್ತು ಅದು ನನ್ನ ವೈಯಕ್ತಿಕ ವಿಚಾರವಾಗಿದೆ” ಎಂದು ರಝ್ಝಾಖ್ ಹೇಳಿರುವುದಾಗಿ ಸ್ಪಷ್ಟೀಕರಣ ನೀಡಿರುವ ಖಾಝಿಯವರು, ಇಂತಹಾ ಅಪಪ್ರಚಾರಗಳಿಂದ ಸಮುದಾಯ ದೂರ ಸರಿಯಬೇಕೆಂದು ಸಲಹೆ ನೀಡಿದ್ದಾರೆ.
ಬಂದರು ಪ್ರದೇಶದ ಸಮಾಜ ಸೇವಕ ಜಾಕಿ ಯಾನೆ ಝಾಕಿರ್ ರವರು ಜೂ.13ರಂದು ದ.ಕ.ಜಿಲ್ಲಾ ಖಾಝಿಯವರನ್ನು ಕೇಂದ್ರ ಜುಮ್ಮಾ ಮಸೀದಿಯ ಮುಂದೆ ಅಡ್ಡಗಟ್ಟಿ ತಲವಾರು ಝಲಪಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದೂ ಮಾತ್ರವಲ್ಲ ಖಾಝಿ ಭವನಕ್ಕೂ ಹೋಗಿ ನಿಂದಿಸಿದ್ದಾಗಿಯೂ ಈ ಪ್ರಕರಣಕ್ಕೆ ರಿಯಾಝುದ್ದೀನ್ ಎಂಬವರು ಕುಮ್ಮಕ್ಕು ನೀಡಿದ್ದಾರೆಂದೂ ಇಬ್ಬರ ಮೇಲೆ ರಝಾಕ್ ಎಂಬವರು ದಿನಾಂಕ 15-6-2020 ಕ್ಕೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎಫ್.ಐ.ಆರ್ ಮಾಡಿಸಿದ್ದಾರೆ.
ಇದರ ಹಿಂದೆ ರಾಜಕೀಯ ಷಡ್ಯಂತ್ರ ಇರುವುದಾಗಿ ತಿಳಿದು ಬರುತ್ತಿದೆ. ಮಂಗಳೂರು ಕೇಂದ್ರ ಜುಮಾ ಮಸೀದಿಗೆ ಸಾವಿರದ ನಾಲ್ಕುನೂರು ವರ್ಷಗಳ ಇತಿಹಾಸವಿದ್ದು ಇದೊಂದು ಪುರಾತನ ಕೇಂದ್ರವಾಗಿರುತ್ತದೆ. ಪ್ರಸ್ತುತ ಸುಳ್ಳು ಕೇಸು ದಾಖಲಿಸಿರುವುದು ಈ ಪವಿತ್ರ ಸ್ಥಳಕ್ಕೆ ಕಳಂಕ ತರುವಂತಾಗಿದ್ದು ಇದರ ಬಗ್ಗೆ ಸರಿಯಾಗಿ ತನಿಖೆ ನಡೆಸಿ ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಮಾಜಿ ಮೇಯರ್ ಕೆ.ಅಶ್ರಫ್ ಅವರು ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್