ಬೆಂಗಳೂರು: ರಾಜ್ಯದಲ್ಲಿ ಹಿಡಿತಕ್ಕೆ ಸಿಗದೆ ಕೊರೋನಾ ಸೋಂಕು ಉಲ್ಬಣಿಸುತ್ತಿದ್ದು ಇಂದು ಒಂದೇ ದಿನ 1272 ಸೋಂಕು ಪತ್ತೆಯಾಗಿ ಮತ್ತಷ್ಟು ಆತಂಕಕ್ಕೆ ಎಡೆಯಾಗಿದೆ. ಹೈಕೋರ್ಟ್ ನ್ಯಾಯಮೂರ್ತಿಗಳಲ್ಲಿ ಒಬ್ಬರ ಕುಟುಂಬದಲ್ಲಿ ಪಾಸಿಟಿವ್ ಕಂಡುಬಂದಿದ್ದು ಮುಖ್ಯ ನ್ಯಾಯ ಮೂರ್ತಿಗಳು ಸ್ವಯಂ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ನಿನ್ನೆಯಷ್ಟೇ ಪ್ರಧಾನಿ ಅನ್ಲಾಕ್ 2 ಬಗ್ಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದು ಮುಂದೆ ಬರುವ ಹಬ್ಬಗಳ ನಿಮಿತ್ತ ಮತ್ತಷ್ಟು ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದರು ಆದರೆ ದೇಶದಲ್ಲಿ ದಿನಂಪ್ರತಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಯನ್ನು ಪರಿಶೀಲಿಸುವಾಗ ಮುಂದೆ ದೊಡ್ಡ ಮಟ್ಟದಲ್ಲಿ ಸಮುದಾಯದಲ್ಲಿ ಸೋಂಕು ಹರಡುವ ಭೀತಿಯನ್ನು ಕೊರೋನಾ ಉಂಟುಮಾಡುತ್ತಿದೆ.
ಬೆಂಗಳೂರು ನಗರ ವೊಂದರಲ್ಲೇ 735 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 84 ಸೋಂಕು ಪತ್ತೆಯಾಗಿದ್ದು ಜನತೆ ಆತಂಕದಲ್ಲೇ ದಿನ ದೂಡುವ ಪರಿಸ್ಥಿತಿ ಬಂದೊದಗಿದೆ. ಜುಲೈ 3 ರಿಂದ ಜುಲೈ 5 ರವರೆಗೆ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನೂ ನಿರ್ಬಂಧಿಸಲಾಗಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,514 ಕ್ಕೆ ಏರಿಕೆಯಾಗಿದೆ. ಇದರಲ್ಲಿ 8000 ಕ್ಕೂ ಅಧಿಕ ಸೋಂಕಿತರು ಪೂರ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ