ಕೋವಿಡ್ನಿಂದ ಜನರ ರಕ್ಷಣೆಗೆ ನಾವು ಸದಾ ಸಿದ್ಧರಾಗಿದ್ದೇವೆ ಎಂದು ಮಾಧ್ಯಮಗಳ ಮುಂದೆ ದೊಡ್ಡದಾಗಿ ಹೇಳಿಕೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿಗಳು ಈಗ ಎಲ್ಲಿ ಹೋಗಿದ್ದಾರೆ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.
ಬೆಂಗಳೂರು; ಬಳ್ಳಾರಿ ಮತ್ತು ಯಾದಗಿರಿಯಲ್ಲಿ ಕೊರೋನಾದಿಂದ ಮಡಿದವರ ಮೃತದೇಹಗಳನ್ನು ಕಸದಂತೆ ಎಸೆದು ಅಂತ್ಯಕ್ರಿಯೆ ನಡೆಸಿದ ಕಹಿ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಅಮಾನವೀಯ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬಿಬಿಎಂಪಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವವೊಂದು ಬಲಿಯಾಗಿರುವುದು ಅಷ್ಟೇ ಅಲ್ಲದೇ, ಮೂರು ಗಂಟೆಗಳ ಕಾಲ ಮೃತದೇಹವನ್ನು ರಸ್ತೆ ಬದಿಯಲ್ಲೇ ಇಟ್ಟು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದ ದೃಶ್ಯವು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ ನಾಗರಿಕರು ಶಾಪ ಹಾಕಿದ್ದಾರೆ.
ನಗರದ ಶ್ರೀನಗರದಲ್ಲಿ ವ್ಯಕ್ತಿಯೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಗಂಟಲು ಮಾದರಿಯನ್ನು ಕೊರೋನಾ ಪರೀಕ್ಷೆಗೆ ನೀಡಿದ್ದರು. ಇಂದು ಬೆಳಗ್ಗೆ ಪರೀಕ್ಷೆಯ ವರದಿಯಲ್ಲಿ ಆ ವ್ಯಕ್ತಿಗೆ ಕೊರೋನಾ ಇರುವುದು ದೃಢಪಟ್ಟಿದೆ. ವರದಿ ಬರುತ್ತಿದ್ದಂತೆ ಆ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಲು ಮುಂದಾಗಿ, ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. 15 ದಿನಕ್ಕಾಗುವಷ್ಟು ಬಟ್ಟೆ ತುಂಬಿದ ಚೀಲವನ್ನು ಹಿಡಿದು ಕಾದು ಕುಳಿತಿದ್ದಾರೆ. ಆದರೆ, ಸಂಜೆ 4 ಗಂಟೆಯಾದರೂ ಆ್ಯಂಬುಲೆನ್ಸ್ ಸ್ಥಳಕ್ಕೆ ಬರಲೇ ಇಲ್ಲ.
ಈ ವೇಳೆ, ಸೋಂಕಿತ ವ್ಯಕ್ತಿ ಕುಳಿತಲ್ಲಿಯೇ ನೆಲಕ್ಕುರುಳಿದ್ದಾರೆ. ಬಳಿಕ ಕುಟುಂಬಸ್ಥರು ನೋಡಿದಾಗ ಉಸಿರಾಟ ನಿಂತು, ಮೃತಪಟ್ಟಿರುವುದು ತಿಳಿದುಬಂದಿದೆ. ಮೃತದೇಹವನ್ನು ಶ್ರೀನಗರದ ರಾಮಾಂಜನೇಯ ದೇವಸ್ಥಾನದ ಬಳಿಯ ರಸ್ತೆ ಮೇಲೆ ಇಟ್ಟು ಕಣ್ಣೀರು ಹಾಕುತ್ತಿದ್ದರೂ ಯಾವೊಬ್ಬ ಅಧಿಕಾರಿ, ಸಿಬ್ಬಂದಿಯೂ ಇತ್ತ ತಲೆ ಕೂಡ ಹಾಕಿಲ್ಲ. ಮಳೆಯಲ್ಲಿಯೇ ಮೃತದೇಹ ನೆನೆಯುತ್ತಾ ಮೂರು ಗಂಟೆಗಳ ಕಾಲ ನಡುರಸ್ತೆಯಲ್ಲಿ ಇತ್ತು.
ಕೋವಿಡ್ನಿಂದ ಜನರ ರಕ್ಷಣೆಗೆ ನಾವು ಸದಾ ಸಿದ್ಧರಾಗಿದ್ದೇವೆ ಎಂದು ಮಾಧ್ಯಮಗಳ ಮುಂದೆ ದೊಡ್ಡದಾಗಿ ಹೇಳಿಕೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿಗಳು ಈಗ ಎಲ್ಲಿ ಹೋಗಿದ್ದಾರೆ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಕೊರೋನಾ ಇದೆ, ಆಸ್ಪತ್ರೆಗೆ ಸೇರಿಸಿ ಎಂದು ಸ್ವತಃ ಸೋಂಕಿತ ವ್ಯಕ್ತಿಯೇ ಮನವಿ ಮಾಡಿಕೊಂಡ ಮೇಲೂ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಕರೆದುಕೊಂಡು ಹೋಗದೆ ನಡುರಸ್ತೆಯಲ್ಲಿಯೇ ಪ್ರಾಣ ಹೋಗಲು ಕಾರಣವಾದ ಹಾಗೂ ರಸ್ತೆಯಲ್ಲಿಯೇ ಮೃತದೇಹ ಗಂಟೆಗಟ್ಟಲೇ ಮಳೆಯಲ್ಲಿ ನೆನೆಯುವಂತೆ ಮಾಡಿದ ಅಧಿಕಾರಿಗಳ ಬೇಜಬಾವ್ದಾರಿತನಕ್ಕೆ ಹೊಣೆ ಯಾರು?.















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್