ರಾಣೇಬೆನ್ನೂರು : ಕೋವಿಡ್ ಬಾಧಿಸಿ ಮರಣ ಹೊಂದಿದ ಸ್ಥಳೀಯ ನಿವಾಸಿಯೊಬ್ಬರ ಮೃತದೇಹವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಹೋದ ಅಮಾನವೀಯ ಮತ್ತು ಬೇಜವಾಬ್ದಾರಿ ಘಟನೆ ನಡೆದಿದ್ದು ಈ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ನಲ್ವತ್ತು ವರ್ಷ ಪ್ರಾಯದ ಚಂದ್ರಶೇಖರ್ ಎಂಬವರು ಜ್ವರ ಮತ್ತು ಕೆಮ್ಮು ಕಾರಣ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೋಸ್ಕರ ದಾಖಲಾಗಿದ್ದರು ಅವರ ಗಂಟಲಿನ ದ್ರವವನ್ನು ಹೆಚ್ಚಿನ ತಪಾಸಣೆಗೆ ಲ್ಯಾಬ್ ಗೆ ಕಳುಹಿಸಲಾಗಿತ್ತು ಆದರೆ ಈ ಮಧ್ಯೆ ಚಂದ್ರಶೇಖರ್ ಮೃತಪಟ್ಟಿದ್ದು ವರದಿ ಬರುವ ಮೊದಲೇ ಮೃತದೇಹವನ್ನು ಆಸ್ಪತ್ರೆಯಿಂದ ಹಸ್ತಾ0ತರ ಮಾಡಲಾಗಿತ್ತು. ಇವೆಲ್ಲದರ ನಡುವೆ ಪ್ಲಾಸ್ಟಿಕ್ ಕವರ್ ನಲ್ಲಿ ಸುತ್ತಿದ್ದ ಮೃತದೇಹ ಬಸ್ ನಿಲ್ದಾಣದಲ್ಲಿ ಕಂಡುಬಂದಿದ್ದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳೇ ಅತ್ಯಂತ ಬೇಜವಾಬ್ದಾರಿ ಮತ್ತು ಅಮಾನವೀಯ ಕೃತ್ಯ ಎಸಗಿದ್ದು ರಾಜ್ಯ ಸರಕಾರಕ್ಕೆ ತೀವ್ರ ಮುಜುಗರ ಎದುರಿಸುವ ಸನ್ನಿವೇಶ ಸೃಷ್ಟಿಯಾಗಿದೆ.
ತಾಲೂಕು ವೈದ್ಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ