ಗುರುಪುರ-ಕೈಕಂಬ ಬಂಗ್ಳಗುಡ್ಡೆ ಎಂಬಲ್ಲಿ ಗುಡ್ಡ ಜರಿದು ಉಂಟಾದ ಅಪಘಾತದಲ್ಲಿ ಇಬ್ಬರು ಮಕ್ಕಳು ಮಡಿದು ಹಲವರಿಗೆ ಗಾಯವಾಗಿ ಅನೇಕ ಮಂದಿಗೆ ಲಕ್ಷಾಂತರ ರೂಪಾಯಿಗಳ ನಾಶ ನಷ್ಟ ಉಂಟಾದ ಘಟನೆಗೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ತೀವ್ರ ಸಂತಾಪ ಮತ್ತು ಆಘಾತ ವ್ಯಕ್ತಪಡಿಸಿದೆ.
ದುರಂತ ಸ್ಥಳದಲ್ಲಿ ಅಧಿಕಾರಿಗಳು, ಇಸಾಬಾ ತಂಡದ ಸಮೇತ ಇತರ ಸ್ವಯಂಸೇವಕರು ಮತ್ತು ಸ್ಥಳೀಯರು ನಡೆಸಿದ ಸಕ್ರಿಯ ಕಾರ್ಯಾಚರಣೆಗಳನ್ನು ಸಂಘಟನೆ ಶ್ಲಾಘಿಸಿದೆ.
ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು, ಸಂತ್ರಸ್ತರ ಪುನರ್ವಸತಿಗೆ ಅಗತ್ಯವಾದ ತುರ್ತು ಕೆಲಸಗಳನ್ನು ಜನಪ್ರತಿನಿಧಿಗಳು ಶೀಘ್ರವಾಗಿ ಕೈಗೊಳ್ಳ ಬೇಕೆಂದೂ ಸಂಘಟನೆ ಮನವಿ ಮಾಡಿದೆ.
ಮೃತರ ಪೋಷಕರ ಮನಃ ಶಾಂತಿಗಾಗಿ ಎಲ್ಲರೂ ವಿಶೇಷ ಪ್ರಾರ್ಥನೆ ಮಾಡಬೇಕು ಮತ್ತು ಸಂತ್ರಸ್ತರಿಗೆ ಅಗತ್ಯವಾದ ನೆರವು ನೀಡಲು ಎಲ್ಲರೂ ಮುಂದೆ ಬರಬೇಕೆಂದು ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಉಸ್ಮಾನ್ ಸ’ಅದಿ ಪಟ್ಟೋರಿ, ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಅಪೇಕ್ಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ