ಮಂಗಳೂರು:ವಿವಿಧ ಸಂಘಟನೆಗಳಲ್ಲಿ ಗುರುತಿಸಿ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಸಿದ್ದೀಖ್ ಗೂನಡ್ಕರವರು ದ.ಕ ರೆಡ್ ಕ್ರಾಸ್ ವತಿಯಿಂದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀಮತಿ. ಸಿಂಧೂ ಬಿ ರೂಪೇಶ್ ರವರಿಂದ ಸನ್ಮಾನವನ್ನು ಪಡೆದು ಕೊಂಡಿದ್ದಾರೆ.
ಸುಳ್ಯ ಪೇಟೆಯಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿರುವ ಸಿದ್ದೀಖ್ ರವರು ಎಸ್.ಎಸ್.ಎಫ್ ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಸಂಚಾಲಕರಾಗಿದ್ದು, ರಕ್ತದಾನದ ಪೂರೈಕೆಗಾಗಿ ರಾತ್ರಿ ಹಗಲೆನ್ನದೆ ಯತ್ನಿಸುತ್ತಿರುವ ಇವರು ಅನಾರೋಗ್ಯ ಪೀಡಿತರ ಪಾಲಿಗೆ ಆಪತ್ಭಾಂದವರಾಗಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರತರಾಗಿದ್ದಾರೆ.
ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರೂ, ಸುಳ್ಯ ಸೆಕ್ಟರ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾಗಿರುವ ಅವರು ಗೂನಡ್ಕ ಶಾರದಾ ಅನುದಾನಿಕ ಸರಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿಯೂ, ಗೂನಡ್ಕ ಜುಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ