ಮಂಗಳೂರು: ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರೀಸರ್ಚ್ ಸೆಂಟರ್ಗೆ ಕೋವಿಡ್-19 ಪರೀಕ್ಷೆ ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಅನುಮೋದನೆ ನೀಡಿದೆ. ಎ.ಜೆ. ಪಿಸಿಆರ್ ಮತ್ತು ವೈರಾಲಜಿ ಪ್ರಯೋಗಾಲಯದ ವೈದ್ಯಕೀಯ ಪರೀಕ್ಷೆಯ ಸೌಲಭ್ಯಗಳಿಗಾಗಿ ಇತ್ತೀಚೆಗೆ ರಾಷ್ಟ್ರೀಯ ಪರೀಕ್ಷಾ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ಮಾನ್ಯತೆ ಮಂಡಳಿ ಮೌಲ್ಯಮಾಪನ ಮಾಡಿ ಮಾನ್ಯತೆ ನೀಡಿದೆ.

ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೋವಿಡ್ -19 ಪರೀಕ್ಷೆಯನ್ನು ಇಲ್ಲಿ ಮಾಡಲಾಗುವುದು. ಮಾದರಿ ಸಂಗ್ರಹಕ್ಕಾಗಿ ಮೀಸಲಾದ ಕಿಯೋಸ್ಕ್ ಆಸ್ಪತ್ರೆಯಲ್ಲಿ ಲಭ್ಯವಿದೆ. ಪ್ರಯೋಗಾಲಯವು ಸುಧಾರಿತ ರಿಯಲ್ ಟೈಮ್ ಆರ್ಟಿ-ಪಿಸಿಆರ್ ಯಂತ್ರ, ಸಂಪೂರ್ಣ ಸ್ವಯಂಚಾಲಿತ ನ್ಯೂಕ್ಲಿಯಿಕ್ ಆಸಿಡ್ ಎಕ್ಸ್ಟ್ರಾಕ್ಟರ್, ಜೈವಿಕ ಸುರಕ್ಷತಾ ಕ್ಯಾಬಿನೆಟ್ಗಳು ಮತ್ತು ಇತರ ಉಪಕರಣಗಳನ್ನು ಒಳಗೊಂಡಿದೆ ಹೊಂದಿದೆ. ಮೈಕ್ರೋಬಯಾಲಜಿ ವಿಭಾಗದ ಸಿಬ್ಬಂದಿ ಮತ್ತು ತಂತ್ರಜ್ಞರು ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ತರಬೇತಿ ಪಡೆದಿದ್ದಾರೆ.
ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆಸ್ಪತ್ರೆಯು ಶಂಕಿತ ಮತ್ತು ಸಕಾರಾತ್ಮಕ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಾದ ಪ್ರತ್ಯೇಕ ವಾರ್ಡ್ಗಳನ್ನು ಸ್ಥಾಪಿಸಿದೆ. ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ತನ್ನ ಸೇವೆಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಎ.ಜೆ. ವೈದ್ಯಕೀಯ ಕಾಲೇಜು, ಸಂಶೋಧನಾ ಕೇಂದ್ರದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್