ಶನಿವಾರಸಂತೆ: ಬದ್ರಿಯಾ ಗಲ್ಫ್ ಅಸೋಸಿಯೇಷನ್ ವತಿಯಿಂದ ಶನಿವಾರಸಂತೆ ಹೋಬಳಿಯ ಗುಂಡುರಾವ್ ಬಡಾವಣೆ ಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದವರಿಗೆ ಕಿಟ್ ವಿತರಿಸಲಾಯಿತು.

COVID-19 ಪರಿಣಾಮವಾಗಿ, ಕಳೆದ 24 ದಿನಗಳಿಂದ ಗ್ರಾಮ ಸೀಲ್ಡೌನ್ ಆದ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿದ್ದ ಗುಂಡುರಾವ್ ಬಡಾವಣೆಯ ಗ್ರಾಮಸ್ಥರಿಗೆ, ಶನಿವಾರಸಂತೆಯ ಅನಿವಾಸಿ ಯುವಕರ ತಂಡದ ಕ್ಷಿಪ್ರ ಕಾರ್ಯಾಚರಣೆಯ ಪರಿಣಾಮವಾಗಿ ಇಂದು ಗ್ರಾಮದ ಹಿರಿಯ ಮುಖಂಡರಾದ ಶೇಕಬ್ಬಾ ಹಾಜಿ ಹಾಗೂ ಹಸೈನಾರ್ ಉಸ್ತಾದ್ ರವರ ನೇತೃತ್ವದಲ್ಲಿ ನೊಂದ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳ ಕಿಟ್ ಒದಗಿಸಿಕೊಡಲಾಯಿತು.

ಬದ್ರಿಯಾ ಗಲ್ಫ್ ಅಸೋಸಿಯೇಷನ್ ಶನಿವಾರಸಂತೆ, ಅನಿವಾಸಿ ಯುವಕರ ತಂಡದ ಈ ನಿಸ್ವಾರ್ಥ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ಮತ ಭೇದ ಮರೆತು ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಯುವಕರ ತಂಡದ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿ, ಇನ್ನೊಬ್ಬರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ