ಮಂಗಳೂರು: ದ.ಕ.ಜಿಲ್ಲಾಧಿಕಾರಿಯವರು ಸಂಕಷ್ಟದ ಸಮಯದಲ್ಲಿಯೂ ತನ್ನ ಕಾರ್ಯನಿರ್ವಹಣೆಯಲ್ಲಿ ಕಾರ್ಯಕ್ಷಮತೆಯನ್ನು ತೋರಿಸಿ ಜಿಲ್ಲೆಯ ಜನರ ಮನಸ್ಸನ್ನು ಗೆದ್ದವರಾಗಿದ್ದಾರೆ.
ಸಮಾಜದ ಎಲ್ಲಾ ವರ್ಗ ದ ಜನರೊಂದಿಗೆ ಬೆರೆತು ಒಬ್ಬ ಮಹಿಳಾ ಅಧಿಕಾರಿಯಾಗಿ ಜಿಲ್ಲೆಯ ಸಾಮರಸ್ಯವನ್ನು ಉಳಿಸುವುದರಲ್ಲಿ ಪ್ರಾಮಾಣಿಕತೆ ಮೆರೆದ ಕೀರ್ತಿಗೆ ಪಾತ್ರರಾಗಿದ್ದರು ದಿಟ್ಟ ಅಧಿಕಾರಿಯಾಗಿದ್ದ ಸಿಂದೂ ರೂಪೇಶ್ ರವರು.
ಮಾದರೀ ಯೋಗ್ಯರಾದ ಅಧಿಕಾರಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಿ ಧೈರ್ಯ ನೀಡುವ ಬದಲು ಗೋವಿನ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡು ಅಮಾಯಕರಿಗೆ ಹಲ್ಲೆ ಮಾಡಿ ಸಮಾಜದ ಸ್ವಾಸ್ಥಕೆಡಿಸುವ ಪುಂಡರನ್ನು ತೃಪ್ತಿ ಪಡಿಸಲು ಸರಕಾರ ವರ್ಗಾವಣೆ ಮಾಡಿದೆ.
ಆ ಮೂಲಕ ಸಮಾಜದ ಹಿತವನ್ನು ಬಲಿಕೊಟ್ಟು ತನ್ನ ಗುಣ ಏನೆಂದು ಸರಕಾರ ರಾಜ್ಯಕ್ಕೆ ತೋರಿಸಿ ಕೊಟ್ಟಿದೆ. ದ.ಕ.ಜಿಲ್ಲೆಯಲ್ಲಿ ಸಾಮರಸ್ಯ ಮತ್ತು ಪ್ರಾಮಾಣಿಕತೆಯನ್ನು ಬಯಸದ ರಾಜಕಾರಣಿಗಳ ಕೈವಾಡ ಇದರಿಂದ ಬಯಲಾಗಿದೆ.
ಸರಕಾರದ ದುರುದ್ದೇಶ ಮತ್ತು ಬಿಜೆಪಿಗರ ಮನಸ್ಥಿತಿ ಯನ್ನು ರಾಜ್ಯದ ಜನರು ಅರಿತು ಜನಪ್ರತಿನಿಧಿಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಬೇಕಾಗಿದೆ.
ತಕ್ಷಣ ಜಿಲ್ಲಾಧಿಕಾರಿಯವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆದೇಶವನ್ನು ಹಿಂಪಡೆಯಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಅಧ್ಯಕ್ಷರಾದ ತಬೂಕ್ ದಾರಿಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್