ಮಂಗಳೂರಿನಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಹಜ್ ಭವನ ನಿರ್ಮಾಣ ಸ್ಥಳದ ವಿಷಯದಲ್ಲಿ ಸೃಷ್ಟಿಯಾದ ಗೊಂದಲದ ಬಗ್ಗೆ ಇತ್ತೀಚೆಗೆ ಮಾಧ್ಯಮ ಸಂದರ್ಶನದಲ್ಲಿ,ಎ. ಬಿ ಇಬ್ರಾಹಿಮ್ ರವರು ವಿಷಯ ಪ್ರಸ್ತಾಪಿಸುತ್ತಾ ದ.ಕ .ಜಿಲ್ಲೆಯವರು ಪ್ರತೀ ಸರಕಾರಿ ಯೋಜನೆಗಳಿಗೆ ಆಕ್ಷೇಪ,ವಿರೋಧ ವ್ಯಕ್ತ ಪಡಿಸುತ್ತಾರೆ ಎಂದು ಹೇಳುವ ಭರದಲ್ಲಿ ಜಿಲ್ಲೆಯ ಜನರನ್ನು ವಿಘ್ನ ಸಂತೋಷಿಗಳು ಎಂದು ಸಂಭೋಧಿಸಿರುವುದು ಖಂಡನೀಯ.
ಹಜ್ ಭವನ ನಿರ್ಮಾಣ ವಿಷಯದಲ್ಲಿ ಜಿಲ್ಲೆಯ ಜನರು ಅದರಲ್ಲೂ ಮುಸ್ಲಿಮ್ ಸಮುದಾಯದ ವರು, ಭವನ ನಿರ್ಮಾಣ ಆಗಬೇಕು ಎಂದು ಸಹಕರಿಸುವರೇ ಹೊರತು ವಿರೋಧಿಸುವರು ಅಲ್ಲ. ಪ್ರಸ್ತುತ ಹಜ್ ಭವನಕ್ಕೆ ಮಂಗಳೂರು ವಿಮಾನ ನಿಲ್ದಾಣದ ಸಮೀಪದ ಕೆಂಜಾರು ಗ್ರಾಮದಲ್ಲಿ ಸರ್ಕಾರವು ಅದೇ ಉದ್ದೇಶಕ್ಕೆ ಮಂಜೂರು ಮಾಡಿದ ಜಮೀನಿನಲ್ಲಿ ಪ್ರಸ್ತುತ ಉದ್ಭವಿಸಿರುವ ಕಾನೂನಾತ್ಮಕ ಅಡೆ ತಡೆಗಳನ್ನು ನಿವಾರಿಸಿ ಹಜ್ ಭವನ ನಿರ್ಮಾಣ ಆಗ ಬೇಕೆಂದು ಜಿಲ್ಲೆಯ ಸರ್ವರೂ ಬಯಸುತ್ತಾರೆ.
ಈ ಬಗ್ಗೆ ಅಗತ್ಯವಿರುವ ಕ್ರಮವನ್ನು ಎ. ಬಿ.ಇಬ್ರಾಹಿಂ ರವರು ಮುಂದುವರಿಸಲಿ ಎಂದು ವಿನಂತಿಸುತ್ತೇವೆ. ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಯಾದ ಇಬ್ರಾಹಿಂ ರವರು ಈ ಬಗ್ಗೆ ಯೋಚಿಸುವುದು ಒಳಿತು.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್