ಬೆಳ್ತಂಗಡಿ : ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾವಲಯದ ವತಿಯಿಂದ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಕೊಕ್ಕಡ ಪರಿಸರದ ಅರ್ಹ ಮುನ್ನೂರಕ್ಕಿಂತಲೂ ಹೆಚ್ಚಿನ ಫಲಾನುಭವಿಗಳಿಗೆ ನೀಡುವ ಮೂಲಕ ಸಾಮಾಜಿಕ ಕಾಳಜಿ ಮೆರೆದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಕ್ಕಡ ಗ್ರಾಮ ಸಮಿತಿ ಕಾರ್ಯದರ್ಶಿ ಝುಬೈರ್ ಕೊಕ್ಕಡ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷರಾದ ಆಶೀಫ್ ಕೊಕ್ಕಡ ಮಾತನಾಡಿ ಎಸ್ ಡಿ ಪಿ ಐ ಪಕ್ಷವು ದೇಶವ್ಯಾಪಿ ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲಿ ಮುಂಚೂಣಿಯಲ್ಲಿ ಸೇವೆ ಮಾಡುತ್ತಿದ್ದು, ಸರಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮತ್ತು ಮಾಹಿತಿಗಳನ್ನು ನೀಡುತ್ತಾ ಬಂದಿದೆ. ಇದರಿಂದಾಗಿ ಸಂಘಟನೆಯ ಮೇಲಿನ ಜನರ ನಿರೀಕ್ಷೆಗಳು ಮತ್ತಷ್ಟು ಬಲಗೊಂಡಿದೆ.
ಈ ಸಂದರ್ಭದಲ್ಲಿ ದುಬೈ ಗೈಸ್ ಇದರ ಅಡ್ಮಿನ್ ರಝಕ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು, ಇಸ್ಮಾಯಿಲ್ ರಾಜಲಕ್ಷ್ಮಿ ಹಿತ ನುಡಿದರು. ವೇದಿಕೆಯಲ್ಲಿ ಮುಂತಾದವರು ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಅನ್ಸಾರ್ ಕೊಕ್ಕಡ ನಿರೂಪಿಸಿ ಧನ್ಯವಾದಗೈದರು.






