ಮಂಗಳೂರು: ರಾಜ್ಯದ ಪ್ರಮುಖ ಸುನ್ನೀ ನಾಯಕರಾಗಿದ್ದ ಪ್ರೊಫೆಸರ್I ಡಾಕ್ಟರ್I ಎಸ್.ಅಬ್ದುಲ್ ರಹ್ಮಾನ್ (ಇಂಜಿನಿಯರ್) ತಲೆಕ್ಕಿ (61) ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಇಂದು (ಆಗಸ್ಟ್ 17 ಸೋಮವಾರ 9pm) ದೇರಳಕಟ್ಟೆ ಕಣಚೂರು ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ.
ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಹಾಗೂ ಸುನ್ನೀ ಯುವಜನ ಸಂಘ (SYS) ಗಳ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುನ್ನತ್ ಜಮಾಅತಿನ ಬೆಳವಣಿಗೆಗೆ ಗಣನೀಯ ಸೇವೆ ಸಲ್ಲಿಸಿದ ಅವರುಪ್ರಮುಖ ಬಹುಭಾಷಾ ವಾಗ್ಮಿ,ಬರಹಗಾರ ಮತ್ತು ಚಿಂತಕರಾಗಿ ಪ್ರಶಸ್ತರಾಗಿದ್ದರು.
Islam and Science ಇಂಗ್ಲಿಷ್ ಪತ್ರಿಕೆಯನ್ನು ನಡೆಸುತ್ತಿದ್ದರು
B.E., M.Tech., PhD. ಪದವೀಧರರಾದ ಅವರು ಪಿ.ಎ.ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಪ್ರೊಫೆಸರ್ ಮತ್ತು HOD (ECE) ಆಗಿದ್ದರು. ಯೇನೆಪೋಯಾ ಯುನಿವರ್ಸಿಟಿಯ ಅಸಿಸ್ಟೆಂಟ್ ರಿಜಿಸ್ಟ್ರಾರ್ ಹಾಗೂ ಬ್ಯಾರೀಸ್ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿದ್ದ ಅವರು ಪತ್ನಿ,ಆರು ಹೆಣ್ಣು ,ಎರಡು ಗಂಡು ಮಕ್ಕಳು, ಬಂಧು- ಬಳಗ,ಶಿಷ್ಯಂದಿರು ಮತ್ತು ಅಪಾರ ಅಭಿಮಾನಿ ವೃಂದವನ್ನು ಅಗಲಿದ್ದಾರೆ
ಅವರ ನಿಧನಕ್ಕೆ ಎಸ್. ವೈ.ಎಸ್.ರಾಜ್ಯಾಧ್ಯಕ್ಷ ಪಿ.ಎಂ.ಉಸ್ಮಾನ್ ಸ’ಅದಿ ಪಟ್ಟೋರಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ.ಝೈನೀ ಕಾಮಿಲ್ ತೀವ್ರ ಸಂತಾಪ ಸೂಚಿಸಿ ಎಲ್ಲರೂ ಅವರ ಪರಲೋಕ ಕ್ಷೇಮಕ್ಕಾಗಿ ಪ್ರಾರ್ಥನೆ ನಡೆಸಬೇಕೆಂದು ವಿನಂತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್