janadhvani

Kannada Online News Paper

ಬಾರ್ಯ ಕರ್ಪಾಡಿ ರಘುರಾಮಶೆಟ್ಟಿ ವಿರುದ್ಧ ಕೇಸು ದಾಖಲಿಸಿದ ಕರ್ಪಾಡಿ ನಾಗರಿಕರು

ಬೆಳ್ತಂಗಡಿ:ಮುಸ್ಲಿಂ ಸಮುದಾಯವನ್ನು ಬಾಂಬ್ ಹಾಕಿ ಕೊಲ್ಲಬೇಕು ಎಂದು ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಹಾಕಿದ ಬಾರ್ಯ ಕರ್ಪಾಡಿ ರಘುರಾಮಶೆಟ್ಟಿ ವಿರುದ್ಧ ಕರ್ಪಾಡಿ ನಾಗರಿಕರು ಪುಂಜಾಲಕಟ್ಟೆ ಠಾಣೆಯಲ್ಲಿ ಎಫ್ ಐ ಆರ್ ಮಾಡಿ ಕೇಸು ದಾಖಲಿಸಿದ್ದಾರೆ.

ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂಬ ವ್ಯಕ್ತಿ ಅಗಸ್ಟ್ 5 ರ ರಾಮಮಂದಿರ ಭೂಮಿ ಪೂಜೆಯಂದು ನೀತಿ ಸಂಹಿತೆ ಉಲ್ಲಂಘಿಸಿ ಪಟಾಕಿ ಸಿಡಿಸಿದ ವಿಚಾರಕ್ಕೆ ಪಂಜಾಲಕಟ್ಟೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆ ಬಳಿಕ ಸಮಾಜಿಕ ಜಾಲದಲ್ಲಿ ತನ್ನನ್ನು ಯಾರಿಗೂ ಏನು ಮಾಡಲು ಸಾದ್ಯವಿಲ್ಲ ಹಾಗೂ ಮುಸ್ಲಿಂ ಸಮುದಾಯವನ್ನು ಬಾಂಬ್ ಹಾಕಿ ನಾಶ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಪಡಿಸುತ್ತಿದ್ದ.

ಆತನ ವಿರುದ್ದ ತಕ್ಷಣವೇ ಕರ್ಪಾಡಿ ನಾಗರಿಕರು ಪುಂಜಾಲಕಟ್ಟೆ ಫೋಲಿಸ್ ಇಲಾಖೆಯ ಗಮನಕ್ಕೆ ತಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ IPC ಕಲಂ 1860 ರ ಪ್ರಕಾರ u/s 505 (2) 506 ಸೆಕ್ಷನ್ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಪೋಲೀಸರು ಬಲೆಬೀಸಿದ್ದಾರೆ. ಆರೋಪಿಯು ತಲೆಮರೆಸಿಕೊಂಡಿದ್ದಾಗಿ ತಿಳಿದು ಬಂದಿದೆ.