janadhvani

Kannada Online News Paper

ನಾನು ಕೂಡಾ ಲಾಸ್ಟ್ ಬೆಂಚ್ ವಿದ್ಯಾರ್ಥಿಯಾಗಿದ್ದೆ- ಡಿ.ಎನ್ ಹೀರಯ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್

ಕ್ಯಾಂಪಸ್ ಎಸ್ಸೆಸ್ಸೆಫ್ಫ್ ಉಪ್ಪಿನಂಗಡಿ ಡಿವಿಷನ್ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ, ಆ31:ಕ್ಯಾಂಪಸ್ ಎಸ್ಸೆಸ್ಸೆಫ್ಫ್ ಉಪ್ಪಿನಂಗಡಿ ಡಿವಿಷನ್ ಇದರ ವತಿಯಿಂದ ಇಲ್ಲಿನ ಹೋಟೆಲ್ ರಾಯಲ್ ಮ್ಯಾಕ್ಸಿಕೋ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಎಜುಕೇಶನಲ್ ಕೇರಿಯರ್ ಗೈಡೆನ್ಸ್ ಶಿಬಿರ ನಡೆಯಿತು.

ಮುಖ್ಯ ತರೇಬೇತುದಾರರಾಗಿ ಮಾತನಾಡಿದ ಶಿಕ್ಷಣ ತಜ್ಞ ರಫೀಕ್ ಮಾಸ್ಟರ್ ಆತೂರು “ವಿದ್ಯಾರ್ಥಿಗಳು ಕೋರ್ಸ್ ಗಳನ್ನು ಆಯ್ಕೆ ಮಾಡುವಲ್ಲಿ ಎಡವುತ್ತಾರೆ. ಆದ್ದರಿಂದ ಅವರಿಷ್ಟದ ಕೋರ್ಸ್ ಗಳನ್ನು ಆಯ್ಕೆ ಮಾಡಲು ಪೋಷಕರು ಸಹಕರಿಸಬೇಕು. ಸಾಧಿಸಲು ಕುಟುಂಬದ ಹಿನ್ನಲೆ ಕಾರಣವೇ ಅಲ್ಲ.ಸಾಧನೆಯ ಮೈಲುಗಲ್ಲನ್ನು ಸಾಧಿಸಿದವರೆಲ್ಲರೂ ಬಡ ಕುಟುಂಬದಿಂದಲೇ ಬಂದವರು. ನಾನೂ ಕೂಡಾ ಕಡು ಬಡತನದಿಂದ ಬೆಳೆದವ ಎಂದರು.

ನಂತರ ಮಾತನಾಡಿದ ಅವರು ವಿವಿಧ ಪ್ರೊಫೇಶನಲ್ ಕೋರ್ಸ್ ಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಡಿ.ಎನ್ ಹೀರಯ್ಯ ಸರ್ ಮಾತನಾಡುತ್ತಾ “ನಾನೂ ಕೂಡಾ ಲಾಸ್ಟ್ ಬೇಂಚ್ ವಿದ್ಯಾರ್ಥಿ, ನಮ್ಮ ಬೇಂಚ್ ಮೇಟ್ಸ್ ಆಗಿದ್ದವರೆಲ್ಲರೂ ಇಂದು ಸಾಧನೆಯ ಗುರಿ ತಲುಪಿದ್ದಾರೆ.ಏಕಾಗ್ರತೆಯಿದ್ದರೆ ಯಶಸ್ಸು ಖಂಡಿತ ಎಂದು ಅಭಿಪ್ರಾಯಪಟ್ಟರು.

ಈ ರೀತಿಯ ಶೈಕ್ಷಣಿಕ ಸಾಧನೆಗೆ ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುತ್ತಿರುವ ಕ್ಯಾಂಪಸ್ ಎಸ್ಸೆಸ್ಸೆಫ್ಫ್ ಇದರ ಕಾರ್ಯಾಚರಣೆ ಶ್ಲಾಘನೀಯ ಎಂದರು.
ಕಾರ್ಯಕರ್ಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯನಾಗಿ ಹೊರಬಂದ ಕೌಶಿಕ್ ರಾವ್ ಸಹಿತ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿಯ ಸುಮಾರು ನೂರರಷ್ಟು ಸಾಧಕರನ್ನು ಸನ್ಮಾನಿಸಲಾಯಿತು.

ಪ್ರಸ್ತುತ ಪತ್ರಿಕೋದ್ಯಮದ ಆವಶ್ಯಕತೆ ಅತ್ಯಗತ್ಯವಾಗಿದ್ದು ಯುವ ವಿದ್ಯಾರ್ಥಿಗಳಿಗೆ ಈ ಬಗೆಗಿನ ಮಾಹಿತಿಗಳನ್ನು ಶೀ ಕ್ಯಾಂಪಸ್ ಪ್ರಾಧ್ಯಾಪಕ ಎಕೆ ನಂದಾವರ ಸರ್ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಸೆಸ್ಸೆಫ್ ಕೋಶಾಧಿಕಾರಿ ಅಲೀ ತುರ್ಕಳಿಕ್ಕೆ,ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಶನ್ ಅಧ್ಯಕ್ಷ ಮುಹಮ್ಮದ್ ಮಿಸ್ಬಾಹಿ,ಡಿವಿಷನ್ ಪ್ರಧಾನ ಕಾರ್ಯದರ್ಶಿ ಯು.ಪಿ ಮುಸ್ತಫಾ, ಬದ್ರಿಯಾ ಸ್ಕೂಲ್ ಆತೂರು ಚೇರ್ ಮ್ಯಾನ್ ಪುತ್ತುಂಞಿ ಸರ್, ಹಕೀಂ ಕಳಂಜಿಬೈಲು ಮುಂತಾದವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಲತೀಫ್ ಮಾಸ್ಟರ್ ಉದ್ಘಾಟಿಸಿ ಕ್ಯಾಂಪಸ್ ಎಸ್ಸೆಸ್ಸೆಫ್ಫ್ ಕಾರ್ಯದರ್ಶಿ ಜುನೈದ್ ತುರ್ಕಳಿಕ್ಕೆ ಸ್ವಾಗತಿಸಿ, ಎಂ.ಎಂ ಮಹ್ ರೂಫ್ ಆತೂರು ವಂದಿಸಿದರು.