ರಿಯಾದ್ | ವಿವಿಧ ಕಾರಣಗಳಿಗಾಗಿ ಸೌದಿ ಅರೇಬಿಯಾದ ಗಡೀಪಾರು ಕೇಂದ್ರದಲ್ಲಿ ಬಂಧನಕ್ಕೊಳಗಾಗಿದ್ದ ಮಲಯಾಳಿಗಳು ಸೇರಿದಂತೆ ಭಾರತೀಯರು ಬಿಡುಗಡೆ ಹೊಂದಿ ಈ ವಾರ ಮನೆ ಸೇರಲಿದ್ದಾರೆ. ಸೌದಿ ಸರ್ಕಾರದ ಕರುಣೆಯಿಂದ ಸುಮಾರು 800 ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ.
ಕೋವಿಡ್ ವ್ಯಾಪಕಗೊಂಡ ಹಿನ್ನೆಲೆಯಲ್ಲಿ, ಹೇಗಾದರೂ ಮನೆ ಸೇರಬೇಕು ಎಂಬ ಇರಾದೆಯಿಂದ ಹಲವು ಬಾಗಿಲುಗಳನ್ನು ತಟ್ಟಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸಂಬಂಧಿಕರು ಮತ್ತು ಸ್ನೇಹಿತರು ಈ ವಿಷಯವನ್ನು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ. ಪಿ. ಅಬೂಬಕರ್ ಮುಸ್ಲಿಯಾರ್ ಅವರ ಗಮನಕ್ಕೆ ತಂದ ನಂತರ ಅವರು ಮಧ್ಯಪ್ರವೇಶಿಸಿದರು.
ತ್ವರಿತ ಪರಿಹಾರಕ್ಕಾಗಿ ಸೌದಿ ಅರೇಬಿಯಾದ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ, ಸೌದಿ ಅರೇಬಿಯನ್ ಸರ್ಕಾರದ ಪ್ರತಿನಿಧಿಗಳನ್ನು ಸಹ ಸಂಪರ್ಕಿಸಿದರು.ಇದರ ಫಲವಾಗಿ ಇದೀಗ 800 ಭಾರತೀಯರಿಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಅವರು ಚೆನ್ನೈ, ವಿಶಾಖಪಟ್ಟಣಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಿಗೆ ಆಗಮಿಸಲಿದ್ದಾರೆ. ಭಾರತದಲ್ಲಿ ಕ್ವಾರಂಟೈನ್ ಸೌಲಭ್ಯವನ್ನು ದೃಢೀಕರಿಸಿದ ನಂತರವೇ ಅವರನ್ನು ಸೌದಿಯಿಂದ ವಾಪಸ್ ಕಳುಹಿಸಲಾಗುತ್ತದೆ. ಜೈಲಿನಲ್ಲಿ ಸೌದಿ ಅಧಿಕಾರಿಗಳು ಗೌರವದಿಂದ ವರ್ತಿಸಿದ್ದರು, ಮನೆಗೆ ಮರಳುವುದು ತುಂಬಾ ಸಮಾಧಾನಕರವಾಗಿದೆ ಎಂದು ಬಂಧಿತರು ಹೇಳುತ್ತಾರೆ.
ಈ ಬಗ್ಗೆ ಮಧ್ಯಪ್ರವೇಶಿಸಿದ ವಿಷಯ ಸಂಬಂಧಿಸಿದಂತೆ ಕಾಂತಪುರಂ ಉಸ್ತಾದರು ಕೇಂದ್ರ ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ