ಕಿನ್ಯಾ: ಆಯುಷ್ಮಾನ್ ಭಾರತ್ ಹಾಗೂ ಆಯೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳನ್ನು ಪಡೆಯುವ ಆಯುಷ್ಮಾನ್ ಕಾರ್ಡ್ ನೊಂದಣಿ ಕಾರ್ಯಕ್ರಮವು SSF & SYS ಮೀಂಪ್ರಿ ಕಿನ್ಯಾ ಶಾಖಾ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್.6 ರಂದು ಮೀಂಪ್ರಿ ಮದ್ರಸದಲ್ಲಿ ನಡೆಯಿತು.

SYS ಅಧ್ಯಕ್ಷರಾದ ಅಲೀ ಕುಂಞಿ ಯವರ ಘನ ಅಧ್ಯಕ್ಷತೆಯಲ್ಲಿ ಸಯ್ಯಿದ್ ಅಲವಿ ತಂಙಳ್ ರವರು ದುಆ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.ಹೈದರ್ ಮುಸ್ಲಿಯಾರ್ ಉದ್ಘಾಟಿಸಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಗ್ರಾಮ ಪಂಚಾಯತ್ ನ ಸಿರಾಜುದ್ದೀನ್ ಕಿನ್ಯಾ, ಫಾರೂಕ್ ಕಿನ್ಯಾ ಹಾಗೂ ಹಮೀದ್ ಕಿನ್ಯಾ ಮಾತನಾಡಿ,”ಇಂತಹ ಕಾರ್ಯಕ್ರಮವನ್ನು ನಮ್ಮ ಕಾಲ ಬುಡಕ್ಕೆ ತಲುಪಿಸಲು ಯಶಸ್ವಿಯಾದ SYS , SSF ಯೋಜನೆಯು ಶ್ಲಾಘನಾರ್ಹ” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮೀಂಪ್ರಿ ಮಸ್ಜಿದ್ ಅಧ್ಯಕ್ಷರಾದ ಮೊಯಿದಿನ್ ಸಂಕೇಶ, ಮೀಂಪ್ರಿ ಮದ್ರಸಾಧ್ಯಾಪಕರಾದ ಇರ್ಶಾದ್ ಅಝ್ಹರಿ, SYS ನಾಯಕರಾದ ಮಹಬೂಬ್ ಸಖಾಫಿ, SSF ಕಿನ್ಯಾ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದ್ ತಂಙಳ್, ಶಾಖಾ ಅಧ್ಯಕ್ಷರು ನೌಫಲ್ ಅಹ್ಸನಿ, SYS ದೇರಳಕಟ್ಟೆ ಸೆಂಟರ್ ನಾಯಕರಾದ ಇಸ್ಮಾಯಿಲ್ ಸಅದಿ ಉರುಮನೆ, ಅಬ್ದುಲ್ ಹಮೀದ್ ಮೀಂಪ್ರಿ ಹಾಗೂ ಇತರ ಸದಸ್ಯರು ಉಪಸ್ಥಿತಿಯಿದ್ದರು.
ಊರಿನ 250 ಕ್ಕಿಂತಲೂ ಮಿಕ್ಕವರು ಈ ಯೋಜನೆಯ ಸದುಪಯೋಗವನ್ನು ಪಡೆದರು.
SYS ದ ಕ ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಕಿನ್ಯಾ ಸ್ವಾಗತಿಸಿ ನಿರೂಪಿಸಿದರು. SYS ಬ್ರಾಂಚ್ ಕಾರ್ಯದರ್ಶಿ ಫಾರೂಕ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ