ಕೊಪ್ಪಳ : ನಾಡಿನಲ್ಲಿ ಸೌಹಾರ್ದತೆಯ ಸಂದೇಶವನ್ನು ಸಾರುವ ಎಸ್ಸೆಸ್ಸೆಫ್ ಸಂಘಟನೆಯನ್ನು ಹಳ್ಳಿಗಲ್ಲಿಗಳಲ್ಲೂ ಕಟ್ಟಿ ಬೆಳೆಸಬೇಕಾಗಿದೆ ಎಂದು ಕನಕಗಿರಿ ಶಾಸಕ ಬಸವರಾಜ ದಡೆಸುಗೂರು ಹೇಳಿದರು.
ಎಸ್ಸೆಸ್ಸೆಫ್ ಕೊಪ್ಪಳ ಜಿಲ್ಲಾ ಸಮಿತಿ ಧ್ವಜದಿನ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡುತ್ತಿದ್ದರು.
ಇಲ್ಲಿನ ಪ್ರತಿಯೊಂದು ಹಳ್ಳಿಗಳಲ್ಲೂ ಸರ್ವಧರ್ಮೀಯರಿಗೂ ಉತ್ತಮ ಸಂದೇಶವನ್ನು ನೀಡುತ್ತಾ ಎಸ್ಸೆಸ್ಸೆಫ್ ಮುಂದೆ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಈ ಸಂಘಟನೆಯನ್ನು ಬೆಳೆಸಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಎಸ್ಸೆಸ್ಸೆಫ್ ಈ ನಾಡಿಗೆ ನೀಡಿದ ಕೊಡುಗೆಗಳು ಹಾಗೂ ಮೂವತ್ತು ವರ್ಷಗಳ ಚಳವಳಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವಿಶ್ವನಾಥ ರೆಡ್ಡಿ ಹೊಸಮನಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸವರಾಜಪ್ಪ ಹಳೆಮನಿ, ತಾಲೂಕು ಪಂಚಾಯತ್ ಸದಸ್ಯ ಪ್ರಕಾಶ್ ಭಾವಿ, ಖ್ಯಾತ ಸಾಹಿತಿ, ಚಿಂತಕ ಬರಹಗಾರ ಡಾ. ಸಿಎಂ ಹನೀಫ್ ಅಮ್ಜದಿ ಬೆಳ್ಳಾರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಸ್ಲಿಂ ಜಮಾಅತ್ ರಾಜ್ಯ ನಾಯಕ ಎಂಡಿಎಸ್ ಮೆಹಬೂಬ್ ಮುಲ್ಲಾ, ಎಸ್ಸೆಸ್ಸೆಫ್ ರಾಜ್ಯ ಡೆಪ್ಯುಟಿ ಅಧ್ಯಕ್ಷ ಮೌಲಾನಾ ಗುಲಾಂ ಹುಸೈನ್ ನೂರಿ, SYS ಜಿಲ್ಲಾಧ್ಯಕ್ಷ ಮೌಲಾನಾ ನಝೀರ್ ಅಹ್ಮದ್, ಹಾಫಿಝ್ ಅನಸ್ ನೆಲ್ಯಾಡಿ, ಹಾಫಿಝ್ ಸಲೀಂ ಗಂಗಾವತಿ ಹಾಗೂ ಇನ್ನಿತರ ಪ್ರಮುಖರು ಭಾಗವಹಿಸಿದರು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮೆಹಬೂಬ್ ಬಸಾಪಟ್ಟಣ ಅಧ್ಯಕ್ಷತೆ ವಹಿಸಿದರು, ಅಬೂಬಕ್ಕರ್ ಸಿದ್ದೀಕ್ ಸಖಾಫಿ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ